+91 8255-266211
info@shreeodiyoor.org

ಒಡಿಯೂರು ಶ್ರೀ ಸಂಸ್ಥಾನದ ನೂತನ ‘ರಾಜಾಂಗಣ’ ಎ.23ಕ್ಕೆ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ-ಜ್ಞಾನ ವಾಹಿನಿಯ ಕೇಂದ್ರ ಸಮಿತಿಯ ಪದಾಧಿಕಾರಿಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು.
ಕೇಂದ್ರ ಸಮಿತಿಯ ಗೌರವಾಧ್ಯಕ್ಷರಾದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಮತ್ತು ಕೇಂದ್ರ ಸಮಿತಿಯ ಅಧ್ಯಕ್ಷ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಒಡಿಯೂರು ಶ್ರೀಗಳವರ 60ರ ಸಂಭ್ರಮ ಆಚರಣೆಯಲ್ಲಿ ಮಾರ್ಗದರ್ಶಕರಾಗಿ ಸಹಕರಿಸಬೇಕೆಂದೂ, ಶ್ರೀ ಸಂಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ರಾಜಾಂಗಣವನ್ನು ಲೋಕಾರ್ಪಣೆ ಮಾಡಬೇಕೆಂದು ವಿನಂತಿಸಿಕೊಂಡರು. ಎಪ್ರಿಲ್‍ನಲ್ಲಿ ಹನುಮ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಎ.23ರಂದು ಶ್ರೀ ಸಂಸ್ಥಾನಕ್ಕೆ ಆಗಮಿಸಿ ರಾಜಾಂಗಣ ಲೋಕಾರ್ಪಣೆ ಮಾಡುವುದಾಗಿ ಪೂಜ್ಯ ಖಾವಂದರು ತಿಳಿಸಿದರು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀಗಳವರು ಖಾವಂದರನ್ನು ಮತ್ತು ಸಾಧ್ವಿ ಮಾತೆಯವರು ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರನ್ನು ಗೌರವಿಸಿದರು.
ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಕೆ. ಪದ್ಮನಾಭ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ಶ್ರೀ ನವನೀತ ಶೆಟ್ಟಿ ಕದ್ರಿ, ಕೋಶಾಧಿಕಾರಿ ಶ್ರೀ ಎ. ಸುರೇಶ್ ರೈ, ಸಂಘಟನಾ ಕಾರ್ಯದರ್ಶಿ ಶ್ರೀ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ, ಕಾರ್ಯದರ್ಶಿ ಶ್ರೀ ಯಶವಂತ ವಿಟ್ಲ, ಸಂಪರ್ಕ ಪ್ರಮುಖರಾದ ಶ್ರೀ ತಾರಾನಾಥ ಶೆಟ್ಟಿ ಒಡಿಯೂರು ಮೊದಲಾದವರು ಉಪಸ್ಥಿತರಿದ್ದರು.

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top