Sri Hanumotsava
Date : Monday, 27-03-2023
Sri Hanumotsava PDF
Date : Saturday, 25-02-2023
“ಈಶಪ್ರೇಮದೊಂದಿಗೆ ದೇಶಪ್ರೇಮವಿದ್ದರೆ ಧರ್ಮದ ಅನುಷ್ಠಾನ ಸಾಧ್ಯ” ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ದಾವಣಗೆರೆ ಘಟಕದ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ – ಒಡಿಯೂರು ಶ್ರೀಆಶೀರ್ವಚನ ದಾವಣಗೆರೆ: “ಈಶಪ್ರೇಮದೊಂದಿಗೆ ದೇಶಪ್ರೇಮವಿದ್ದರೆ ಧರ್ಮದ ಅನುಷ್ಠಾನ ಸಾಧ್ಯ. ಈಶಪ್ರೇಮದೊಟ್ಟಿಗೆ ದೇಶಪ್ರೇಮವೂ ಬೇಕು. ಅದು ಎರಡೂ ಜತೆಯಲ್ಲಿ ಹೋಗಬೇಕು. ಧರ್ಮ ಅನುಷ್ಠಾನವಾಗಬೇಕಾದರೆ ದೇಶಪ್ರೇಮ ಬೇಕು. ಆಗ ಬದುಕು ಬದುಕಾಗುತ್ತದೆ. ನಮ್ಮ ಮಕ್ಕಳಿಗೆ ದೇವರ ನಂಬಿಕೆಯನ್ನು ತಿಳಿಸಿಕೊಟ್ಟು ದೇಶಪ್ರೇಮದ ಅರಿವು ಮೂಡಿಸುವ ಕೆಲಸ ತಾಯಂದಿರು ಮಾಡಬೇಕು. ದಾವಣಗೆರೆಯ ಮಹಿಳೆಯರು […]
Date : Wednesday, 18-01-2023
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜನವರಿ 30 ಮತ್ತು 31ರಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಆಕಾಶವಾಣಿಯ ನಿವೃತ್ತ ನಿಲಯ ನಿರ್ದೇಶಕ, ಸಾಹಿತಿ, ಕವಿ ಡಾ. ವಸಂತಕುಮಾರ ಪೆರ್ಲ ಇವರ ಅಧ್ಯಕ್ಷತೆಯಲ್ಲಿ ಎರಡು ದಿನ ತುಳು ಸಾಹಿತ್ಯ ಸಮ್ಮೇಳನವು ಈ ಸುಸಂದರ್ಭ ನಡೆಯಲಿದೆ. ಜ.30ರಂದು ಬೆಳಿಗ್ಗೆ ತುಳು ಸಾಹಿತ್ಯ ಸಮ್ಮೇಳನವನ್ನು ಪೂಜ್ಯ ಶ್ರೀಗಳವರು ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಅಖಿಲ […]
Date : Wednesday, 11-01-2023
ಶ್ರೀ ದತ್ತ ಜಯಂತಿ ಮಹೋತ್ಸವ-ಹರಿಕಥಾ ಸತ್ಸಂಗ ಸಪ್ತಾಹ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನದ.1: “ಗುರುಪರಂಪರೆಯನ್ನು ಸದಾ ನಾವು ಗೌರವಿಸಬೇಕಾಗಿದೆ. ಗುರುವಿನಿಂದ ದೇವರ ಅನುಗ್ರಹ ಸಾಧ್ಯ. ಇದೊಂದು ವಿಶೇಷ ಸಂಭ್ರಮದ ದಿನವಿದು. ಆಧ್ಯಾತ್ಮದೆಡೆಗೆ ಸಾಗಿದಾಗ ಜೀವನ ಆನಂದಮಯವಾಗಿರುತ್ತದೆ. ಸತ್ಸಂಗ, ಅಧ್ಯಾತ್ಮದ ಅನುಭೂತಿಯನ್ನು ಅನುಭಾವಗಳ ಮೂಲಕ ಸಿದ್ಧಿಸಿಕೊಳ್ಳಬೇಕು. ಮನುಷ್ಯ ಉತ್ಸವ ಪ್ರಿಯ. ಭಗವಂತ ಏನನ್ನು ಬಯಸುವುದಿಲ್ಲ. ಮಾಧವನಲ್ಲಿ ಭಕ್ತಿ ಇರಬೇಕು. ಮಾನವನಲ್ಲಿ ಪ್ರೀತಿ ಇರಬೇಕು ಆಗ ಬದುಕು ಹಸನಾಗಲು ಸಾಧ್ಯ. ಮನುಷ್ಯನಿಗೆ ಎಲ್ಲಿ ತೃಪ್ತಿ ಸಿಗುತ್ತದೋ ಅಲ್ಲಿ ಭಗವಂತನಿದ್ದಾನೆ. ಹಿರಿಯರ […]
Date : Wednesday, 04-01-2023
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜನವರಿ ತಿಂಗಳ 30, ಸೋಮವಾರ ಮತ್ತು 31, ಮಂಗಳವಾರ ‘ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆ – 23ನೇ ತುಳು ಸಾಹಿತ್ಯ ಸಮ್ಮೇಳನ’ ಜರಗಲಿರುವುದು. ಅದರ ಅಂಗವಾಗಿ ತುಳುನಾಡಿನ ಸಾಂಸ್ಕøತಿಕ, ಕಲಾ, ನೃತ್ಯತಂಡಗಳಿಗೆ ‘ತುಳು ಜಾನಪದ ನಲಿಕೆ-ತೆಲಿಕೆ ಪಂತೊ’ವನ್ನು ಜನವರಿ 30ರಂದು ಸೋಮವಾರ ಮಧ್ಯಾಹ್ನ 1.30ರಿಂದ ಸಂಜೆ 5.30ರ ವರೆಗೆ ಏರ್ಪಡಿಸಲಾಗಿದೆ. ಎಲ್ಲ ವಯಸ್ಸಿನ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದೆ. ತಂಡದ ಹೆಸರು, ಪೂರ್ಣ ವಿಳಾಸ, ನೃತ್ಯದ ವಿವರ, ಕಲಾವಿದರ ಸಂಖ್ಯೆ ಮುಂತಾದ […]
Date : Tuesday, 27-12-2022
“ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು. ಆ ಮೂಲಕ ಧರ್ಮಪ್ರಜ್ಞೆಯೊಂದಿಗೆ ರಾಷ್ಟ್ರ ಕಟ್ಟುವ ಕಾಯಕದಲ್ಲಿ ತೊಡಗಿಕೊಳ್ಳಬೇಕು. ಮಕ್ಕಳಲ್ಲಿರಾಷ್ಟ್ರಪ್ರಜ್ಞೆಯನ್ನು ಬೆಳೆಸುವ ಕಾರ್ಯದ ಅನಿವಾರ್ಯತೆ ಇದೆ. ಮಕ್ಕಳು ತಮ್ಮನ್ನು ತಾವೇ ರೂಪಿಸುವ ಶಿಲ್ಪಿಗಳಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನಗೈದರು. ಪ್ರಾರಂಭದಲ್ಲಿ ಸಾಧ್ವಿ ಶ್ರೀ ಮಾತಾನಂದಮಯಿಯವರು ದೀಪೋಜ್ವಲನೆಗೈದು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು. ನ ಮತ್ತು ಮಿತ್ತನಡ್ಕ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ಚಂದ್ರಶೇಖರ್, […]
Date : Sunday, 18-12-2022
“ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು. ಆ ಮೂಲಕ ಧರ್ಮಪ್ರಜ್ಞೆಯೊಂದಿಗೆ ರಾಷ್ಟç ಕಟ್ಟುವ ಕಾಯಕದಲ್ಲಿ ತೊಡಗಿಕೊಳ್ಳಬೇಕು. ಮಕ್ಕಳಲ್ಲಿ ರಾಷ್ಟ್ರಪ್ರಜ್ಞೆಯನ್ನು ಬೆಳೆಸುವ ಕಾರ್ಯದ ಅನಿವಾರ್ಯತೆ ಇದೆ. ಮಕ್ಕಳು ತಮ್ಮನ್ನು ತಾವೇ ರೂಪಿಸುವ ಶಿಲ್ಪಿಗಳಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನಗೈದರು. ಪ್ರಾರಂಭದಲ್ಲಿ ಸಾಧ್ವಿ ಶ್ರೀ ಮಾತಾನಂದಮಯಿಯವರು ದೀಪೋಜ್ವಲನೆಗೈದು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಸುಧಾ, ಕನ್ಯಾನ ಮತ್ತು ಮಿತ್ತನಡ್ಕ ಕ್ಲಸ್ಟರ್ನ […]
Date : Monday, 24-10-2022
ಅ.22: “ಆಯುಷ್ಯ, ಆರೋಗ್ಯ, ಯಶಸ್ಸು ಕರುಣಿಸುವವನೇ ಧನ್ವಂತರೀ. ಜಲೂಕವನ್ನು ಧರಿಸಿ ಅವತರಿಸಿದ ಧನ್ವಂತರೀ ದೇವರನ್ನು ಕಂಡಾಗ ಎಲ್ಲ ಗಿಡಗಳಲ್ಲಿಯೂ ಔಷಧೀಯ ಗುಣವಿದೆ ಎಂಬುದನ್ನು ತಿಳಿಯಬಹುದು. ನಾವು ಸೇವಿಸುವ ಆಹಾರವೇ ಔಷಧಿಯಾಗಬೇಕು. ವಾರಕ್ಕೊಂದು ಉಪವಾಸ ಮಾಡಲು ದಾಸರು ತಿಳಿಸಿದ್ದಾರೆ. ಇದರ ಉದ್ದೇಶವೇ ಆರೋಗ್ಯವನ್ನು ಕಾಪಿಡುವುದಾಗಿದೆ. ಧನ್ವಂತರೀ ಜಯಂತಿಯ ಆಚರಣೆ ಸಂಸ್ಕೃತಿಯನ್ನು ಉಳಿಸುವುದಾಗಿದೆ. ಸಂಸ್ಕೃತಿಯನ್ನು ಬೆಳೆಸಬೇಕಾದರೆ ಸಂಸ್ಕಾರ ಅಗತ್ಯ. ತುಳುನಾಡಿನ ಸಂಸ್ಕೃತಿಯ ಬಗ್ಗೆ ಅರಿವಿದಲ್ಲದವರು ಅವಹೇಳನ ಮಾಡಬಹುದು. ಲೋಕದ ಹಿತವನ್ನು ಕಾಪಿಡಲು, ಇಹದಿಂದ ಪರಕ್ಕೆ ಸಾಗಬೇಕಾದರೆ ಸತ್ಕರ್ಮಗಳಲ್ಲಿ ತೊಡಗಿಸಿಕೊಳ್ಳಬೇಕು. ಸಮುದ್ರ […]
Date : Wednesday, 12-10-2022
ಒಡಿಯೂರು ಶ್ರೀ ಸಂಸ್ಥಾನದಲ್ಲಿ ನಾಟಕೋತ್ಸವ – ತುಳು ನಾಟಕ ಸ್ಪರ್ಧೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ದಶಂಬರ 1ರಿಂದ 7ರ ತನಕ ಜರಗುವ ಶ್ರೀ ದತ್ತ ಜಯಂತಿ ಮಹೋತ್ಸವದ ಸುಸಂದರ್ಭ ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ತುಳು ನಾಟಕ ಸ್ಪರ್ಧೆ ನಡೆಯಲಿದೆ. ನಿಯಮಗಳು: 1) ನೈತಿಕ ಮೌಲ್ಯಯುಕ್ತ, ಸಂದೇಶ ಭರಿತ ಯಾವುದೇ ಕಥಾವಸ್ತುವನ್ನು ಆಧರಿಸಿದ ಕೃತಿಯಾಗಿರಬೇಕು. 2) ಸಾಮಾಜಿಕ, ಪೌರಾಣಿಕ, ಜಾನಪದ, ಚಾರಿತ್ರಿಕ, ಕಾಲ್ಪನಿಕ ಯಾವುದೇ ಸ್ವರೂಪದಲ್ಲಿರಬಹುದು. 3) ಪ್ರದರ್ಶನದ ಅವಧಿ ಕನಿಷ್ಟ 1.30 – ಗರಿಷ್ಟ […]
The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.