Date : Saturday, 22-08-2020
“ದಾಸ್ಯದಿಂದ ಮುಕ್ತವಾಗಿರುವುದೇ ಸ್ವಾತಂತ್ರ್ಯ. ಸ್ವಾತಂತ್ರ್ಯ ಸ್ವೇಚ್ಛೆಯಾಗಬಾರದು. ಸುವ್ಯವಸ್ಥಿತವಾದ ಆಡಳಿತ ನೋಡಬೇಕಾದರೆ ಪ್ರಜ್ಞಾವಂತ ಪ್ರಜೆಗಳಿರಬೇಕು. ಆಗಲೇ ಆದರ್ಶ ರಾಷ್ಟ್ರವಾಗುವುದು. ಧರ್ಮದಂಡದ ಮೂಲಕ ಆಡಳಿತ ನಡೆಸಿದಾಗ ಅಹಂಕಾರವಿರುವುದಿಲ್ಲ. ರಾಜ ದಂಡ, ಧರ್ಮದಂಡ ಎರಡೂ ಅವಶ್ಯಕ. ಧರ್ಮವನ್ನು ಮರೆತ ರಾಜನಿಗೂ ಉಳಿಗಾಲವಿಲ್ಲ. ದೇಶದ ಬಲಿಷ್ಠತೆಗೆ, ಸಂರಕ್ಷಣೆಗೆ ನಾವೆಲ್ಲರೂ ಬದ್ಧರಾಗಿರಬೇಕು. ಭಾರತದ ದೇಶದ ಅಡಿಪಾಯವೇ ಅಧ್ಯಾತ್ಮಿಕತೆ. ಇದರಿಂದಾಗಿ ಭಾರತಕ್ಕೆ ಯಾವುದೇ ಅಪಾಯವಿಲ್ಲ. ಇದಕ್ಕೆ ಪೂರಕವಾಗಿ ಮಕ್ಕಳಲ್ಲಿ ಧಾರ್ಮಿಕತೆಯೊಂದಿಗೆ ರಾಷ್ಟ್ರೀಯತೆಯನ್ನು ಬೆಳೆಸಬೇಕು. ಬದುಕು ಶಿಕ್ಷಣವನ್ನು ಕೊಡಿಸಬೇಕು. ಸತ್ಸಂಕಲ್ಪದ ಭವಿಷ್ಯದ ರಾಷ್ಟ್ರ ನಿರ್ಮಾಣಕ್ಕೆ ಕಂಕಣಬದ್ಧರಾಗಿರುವ ಪ್ರಧಾನಿ […]
Read More
Date : Saturday, 22-08-2020
Read More
Date : Wednesday, 12-08-2020
2019-20ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶ್ರೀಗುರುದೇವ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿರುತ್ತದೆ ಮತ್ತು ಶ್ರೀ ಗುರುದೇವ ಕನ್ನಡ ಮಾಧ್ಯಮ ಶಾಲೆಯು ಶೇಕಡಾ 80 ರ ಫಲಿತಾಂಶವನ್ನು ಪಡೆದಿರುತ್ತದೆ. 4 ವಿದ್ಯಾರ್ಥಿಗಳು A+ ಗ್ರೇಡ್ ಹಾಗೂ 7ವಿದ್ಯಾರ್ಥಿಗಳು A ಗ್ರೇಡ್ಗಳನ್ನು ಪಡೆದಿರುತ್ತಾರೆ. ಆಂಗ್ಲಮಾದ್ಯಮದಲ್ಲಿ ಜಿತೇಶ್ ಪಿ ಶೆಟ್ಟಿ 602 ಅಂಕಗಳೂ ಅಕ್ಷಿತಾ ಎನ್ 579 ಹಾಗೂ ಅನನ್ಯಲಕ್ಷ್ಮಿ 578 ಅಂಕಗಳನ್ನು ಪಡೆದಿರುತ್ತಾರೆ. ಕನ್ನಡಮಾಧ್ಯಮದಲ್ಲಿ ಶ್ರವಣ್ ಕುಮಾರ್ 585 ಅಂಕಗಳನ್ನು […]
Read More
Date : Wednesday, 12-08-2020
ಕೃಷ್ಣ ಸಂಸ್ಕೃತಿಯ ದ್ಯೋತಕ. ಸಂಸ್ಕೃತಿಯ ಬೆಳಕು ರಾಮ-ಕೃಷ್ಣರು. ಮಕ್ಕಳನ್ನು ಸಂಸ್ಕೃತಿಯ ಉಳುವಿನ ಹರಿಕಾರರನ್ನಾಗಿ ಬೆಳೆಸಬೇಕು. ಆ ಮೂಲಕ ಭವ್ಯ ಭಾರತ ನಿರ್ಮಾಣದ ಭವಿಷ್ಯ ಬರೆಯುವಂತಾಗಬೇಕು. ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಗುರುಬಂಧುಗಳು ತಮ್ಮ ತಮ್ಮ ಮನೆಯಲ್ಲೇ ಆಚರಿಸಿ ಸಂಭ್ರಮಿಸಬೇಕೆಂದು ಒಡಿಯೂರು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂದೇಶ ನೀಡಿದ್ದಾರೆ. ಶ್ರೀ ಸಂಸ್ಥಾನದಲ್ಲಿ ಮುದ್ದುಕೃಷ್ಣ ವೇಷಧಾರಿ ಮಕ್ಕಳ ವೀಡಿಯೋ ಮೂಲಕ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುವುದು. ಆಗಸ್ಟ್ 11, 2020ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ನಾಲ್ಕು ವರುಷದೊಳಗಿನ […]
Read More
Date : Thursday, 06-08-2020
ಕೋಟಿ ಕೋಟಿ ಭಾರತೀಯರ ಕನಸಾದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ಸಂಪನ್ನಗೊಳ್ಳುತ್ತಿರುವ ಐತಿಹಾಸಿಕ ಸುಮುಹೂರ್ತದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು “ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲಿ, ಈ ಐತಿಹಾಸಿಕ ದಿನದ ಸವಿನೆನಪಿಗಾಗಿ ಒಡಿಯೂರು ಶ್ರೀ ಸಂಸ್ಥಾನದ ಪರಿಸರದಲ್ಲಿ ‘ಕದಂಬವನ’ವನ್ನು ನಿರ್ಮಿಸಲು ಚಾಲನೆ ನೀಡಿ, ಪ್ರಕೃತಿ ಸಂರಕ್ಷಣೆಯ ಸಂಕಲ್ಪ ಮಾಡಿ” ಅನುಗ್ರಹ ಸಂದೇಶವಿತ್ತರು. ಸಾಧ್ವಿ ಶ್ರೀ ಮಾತಾನಂದಮಯೀ, ಒಡಿಯೂರು ಶ್ರೀ ವಜ್ರಮಾತಾ […]
Read More
Date : Monday, 03-08-2020
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ-ಮಹಾಭಾರತ ಸಂಸ್ಕøತಿಯ ಕಣ್ಣುಗಳಿದ್ದಂತೆ. ‘ರಾಮ’ ಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ತ್ವಗಳ ಚಿಂತನೆಯು ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿ ‘ರಾಮ’ ಎನ್ನಲು ಅನುಕೂಲವಾದುದು. ‘ಆ ಮಂತ್ರ ಈ ಮಂತ್ರ ಜಪಿಸಿ ನೀ ಕೆಡಬೇಡ, ರಾಮ ಮಂತ್ರವ ಜಪಿಸೋ…’ ಎಂದು ದಾಸರು ಕೊಂಡಾಡಿದ್ದಾರೆ. ಸಾಕ್ಷಾತ್ ಶಿವನೇ […]
Read More
Date : Monday, 03-08-2020
ವಿಟ್ಲ ಅರಸರೆಂದೇ ಪ್ರಖ್ಯಾತರಾದ, ಒಡಿಯೂರು ಶ್ರೀ ಸಂಸ್ಥಾನದ ಮುಖ್ಯ ಅಭಿಮಾನಿಗಳೂ ಆದ ಶ್ರೀಯುತ ಜನಾರ್ದನ ವರ್ಮ ಅರಸರು ದೈವಾಧೀನರಾಗಿರುವುದು ಬೇಸರದ ಸಂಗತಿ. ಇವರ ಕಾಲಾವಧಿಯಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನವು ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ನಡೆದಿರುವುದು ಅಲ್ಲದೆ ವಿಟ್ಲ ಸೀಮೆಯಲ್ಲಿ ಹಲವಾರು ದೇವಸ್ಥಾನಗಳು ಜೀರ್ಣೋದ್ಧಾರಗೊಂಡಿರುವುದು ಸ್ಮರಣೀಯ. ಸರಳ ವ್ಯಕ್ತಿತ್ವದ, ಮೃಧು ನಡೆ-ನುಡಿಯ, ಅರಸೊತ್ತಿಗೆಯನ್ನು ಕರ್ತವ್ಯವೆಂದು ಪಾಲಿಸಿಕೊಂಡು ಬಂದಿರುವುದು ಇವರ ವಿಶೇಷತೆ. ಅಗಲಿದ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಕುಟುಂಬಿಕರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಆರಾಧ್ಯದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ.
Read More
Date : Monday, 03-08-2020
“ಸಂಪತ್ತು ಎಂದರೆ ಹಣ ಮಾತ್ರವಲ್ಲ. ಇದರಲ್ಲಿ ಅಷ್ಟ ಐಶ್ವರ್ಯಗಳು ಸೇರಿವೆ. ಸಂಪತ್ತಿನ ಅಧಿದೇವತೆ ಲಕ್ಷ್ಮೀ. ಸಂಪತ್ತನ್ನು ಹೇಗೆ ಬಳಸಬೇಕೆಂಬುದನ್ನು ಅಧ್ಯಾತ್ಮಿಕತೆ ತಿಳಿಸುತ್ತದೆ. ಧರ್ಮಪ್ರಜ್ಞೆಯ ಸಂಪತ್ತಿನೊಂದಿಗೆ ಜ್ಞಾನವೂ ನಮ್ಮಲ್ಲಿ ಇರಬೇಕು. ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾ ಶಕ್ತಿಗಳು ಸೇರಿಕೊಂಡಾಗ ಜೀವನಮೌಲ್ಯ ವೃದ್ಧಿಸುತ್ತದೆ. ಶ್ರಾವಣ ಮಾಸದ ಮೊದಲ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆಯನ್ನು ಆಚರಿಸುವುದು ವಾಡಿಕೆ. ಇಂತಹ ಆಚರಣೆಗಳು ರಾಷ್ಟ್ರೀಯ ಭಾವನೆಯನ್ನು ಮೂಡಿಸುತ್ತದೆ. ಸಮುದ್ರ ಮಥನದಿಂದ ವಿಷ-ಅಮೃತ ಇತ್ಯಾದಿ ದೊರೆತಂತೆ ಬದುಕಿನ ಮಂಥನದಿಂದ ಸುಖ-ದುಃಖಗಳು ಪ್ರಾಪ್ತವಾಗುತ್ತವೆ. ತಾನೂ ಬದುಕಿ ಇತರರನ್ನು ಬದುಕಬಿಡುವುದೇ […]
Read More
Date : Tuesday, 28-07-2020
“ದತ್ತ ಸಂಪ್ರದಾಯದಲ್ಲಿ ಶ್ರೀ ಗುರುಪಾದುಕಾರಾಧನೆಗೆ ವಿಶೇಷವಾದ ಮಹತ್ವವಿದೆ. ಅಜ್ಞಾನ ಎಂಬ ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವನೇ ಗುರು. ಗುರುವಿನ ಅನುಗ್ರಹದಿಂದ ಬದುಕು ಹಸನಾಗಲು ಸಾಧ್ಯ. ಬದುಕನ್ನು ಆರೋಗ್ಯವಾಗಿಡುವುದು ಹೇಗೆ ಸಾಧ್ಯ ಎಂಬುದನ್ನು ಆಯುರ್ವೇದವು ತಿಳಿಸಿದೆ. ಪರೋಪಕಾರದ ಬದುಕು ಶ್ರೇಷ್ಠವಾಗಿದ್ದು, ಸುಖ-ದುಃಖಗಳಿಂದ ಕೂಡಿರುವುದು ನಿಜವಾದ ಬದುಕು. ಸುಖ-ದುಃಖಗಳನ್ನು ಸೋಪಾನವಾಗಿಸಿದಾಗ ಗುರಿ ತಲುಪಲು ಸಾಧ್ಯ. ಭಾರತೀಯ ಪರಂಪರೆ, ಸಂಸ್ಕೃತಿಯ ಜಾಗೃತಿಗೆ ಪರಿಸ್ಥಿತಿ ಸಕಾಲವಾಗಿದೆ. ಭಾಷೆ, ಸಂಸ್ಕೃತಿಗೆ ಹೆಚ್ಚಿನ ಮಹತ್ವ ನೀಡಬೇಕು. ಧನಾತ್ಮಕ ಅಂಶಗಳನ್ನು ಮೈಗೂಡಿಸಿ, ಋಣಾತ್ಮಕ ಅಂಶಗಳನ್ನು ದೂರಾಗಿಸಬೇಕು. ಭಗವಂತನು […]
Read More
Date : Wednesday, 15-07-2020
ಒಡಿಯೂರು ಶ್ರೀ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವವನ್ನು (ಜುಲೈ 17, 2020) ಗುರುಬಂಧುಗಳು ಮನೆ-ಮನಗಳಲ್ಲಿ ಗುರುವಂದನೆಯನ್ನು ನಡೆಸುವ ಮೂಲಕ ಪೂಜ್ಯ ಶ್ರೀಗಳವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯು ಪ್ರಕಟಣೆ ನೀಡಿದೆ. ಗುರುಬಂಧುಗಳು ತಮ್ಮ ಆರೋಗ್ಯವನ್ನು ಕಾಯ್ದುಕೊಂಡು ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪೂಜ್ಯ ಶ್ರೀಗಳವರು ಕರೆ ನೀಡಿದ್ದಾರೆ. ಮಹಾಮಾರಿಯ ಬಗ್ಗೆ ಭಯ ಪಡದೆ ನಿರ್ಭೀತರಾಗಿ, ಆತ್ಮವಿಶ್ವಾಸವನ್ನು ವೃದ್ಧಿಸಿಕೊಂಡು, ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಸರಕಾರದ ನಿಯಮಗಳಿಗೆ ಬದ್ಧರಾಗಿ ತಾನು ಬದುಕಿ ಇತರರನ್ನು ಬದುಕಬಿಡೋಣ […]
Read More