+91 8255-266211
info@shreeodiyoor.org

ಪಾಲ್ಗರ್ ಸಂತರ ಹತ್ಯೆಗೆ ಒಡಿಯೂರು ಶ್ರೀಗಳ ಖಂಡನೆ:

ಮಹಾರಾಷ್ಟ್ರದ ಪಾಲ್ಗರ್ ಎಂಬಲ್ಲಿ ಅಮಾನುಷವಾಗಿ ಈರ್ವರು ಸಂತರ ಹತ್ಯೆ ನಡೆದಿರುವುದು ಖಂಡನೀಯ. ಭಾರತ ದೇಶದ ಮೌಲ್ಯವೆಂದರೆ ಸಾಧು-ಸಂತರು. ಸದುದ್ದೇಶಕ್ಕಾಗಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿರುವುದು ದುಃಖಕರ. ಸಂತರ ಹತ್ಯೆ ಎಂದರೆ ಸಂಸ್ಕೃತಿಯ ಹತ್ಯೆಯಂತೆ. ಬದುಕಿ-ಬದುಕಬಿಡುವ ಸಂತರ ಬದುಕನ್ನೇ ಕಸಿದುಕೊಳ್ಳುವುದು ಉಚಿತವಲ್ಲ. ಕಾನೂನನ್ನು ಕೈಗೆತ್ತಿಕೊಳ್ಳುವುದು ಅಪರಾಧ. ಇಂತಹ ಕೃತ್ಯಗೈದ ದುಷ್ಟರಿಗೆ ಕೂಡಲೇ ಕಠಿಣ ಶಿಕ್ಷೆಯಾಗಬೇಕು. ಸಾಧು-ಸಂತರು ಎಚ್ಚೆತ್ತುಕೊಂಡು ಇದರ ಬಗ್ಗೆ ಕೂಡಲೇ ಗಮನಹರಿಸಬೇಕು. ಸರಕಾರವು ಕೂಲಂಕುಷವಾಗಿ ತನಿಖೆ ನಡೆಸಿ ನ್ಯಾಯ ದೊರಕಿಸಬೇಕಾಗಿ ವಿನಂತಿಸುತ್ತೇವೆ.

Read More

ಒಡಿಯೂರು ಶ್ರೀ ಸಂಸ್ಥಾನದಿಂದ ದಿನ ಬಳಕೆ ಸಾಮಾಗ್ರಿಗಳ ವಿತರಣೆ:

  ಕರೋನಾ(ಕೋವಿಡ್-19)ದ ಪರಿಣಾಮ ಲಾಕ್‍ಡೌನ್‍ನಿಂದಾಗಿ ತೊಂದರೆಗೀಡಾದ ಜನತೆಗೆ ಸ್ಪಂದಿಸಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಿಂದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಕನ್ಯಾನ ಗ್ರಾಮದ ಆಯ್ದ ಮನೆಗಳಿಗೆ ಅಕ್ಕಿ, ಸಕ್ಕರೆ, ಚಾಹುಡಿ, ಸಾಂಬಾರುಹುಡಿ ಇತ್ಯಾದಿ ದಿನ ಬಳಕೆಯ ವಸ್ತುಗಳನ್ನು ವಿತರಿಸಿದರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಶ್ರೀ ಪಿ. ಲಿಂಗಪ್ಪ ಗೌಡ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕನ್ಯಾನ ಗ್ರಾಮ ಸಮಿತಿಯ ಅಧ್ಯಕ್ಷ ಶ್ರೀ ಕೆ.ಪಿ. ರಘುರಾಮ ಶೆಟ್ಟಿ, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಶ್ರೀ […]

Read More

ಒಡಿಯೂರು ಶ್ರೀ ಸಂಸ್ಥಾನದಿಂದ ದಿನ ಬಳಕೆ ಸಾಮಾಗ್ರಿ ವಿತರಣೆ:

ಕರೋನಾ (ಕೋವಿಡ್-19)ದ ಪರಿಣಾಮ ಲಾಕ್‍ಡೌನ್‍ನಿಂದಾಗಿ ತೊಂದರೆಗೀಡಾದ ಜನತೆಗೆ ಸ್ಪಂದಿಸಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಿಂದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಕರೋಪಾಡಿ ಗ್ರಾಮದ ಸಾವಿರಕ್ಕೂ ಮಿಕ್ಕಿ ಮನೆಗಳಿಗೆ ಅಕ್ಕಿ, ಸಕ್ಕರೆ, ಚಾಹುಡಿ, ಸಾಂಬಾರುಹುಡಿ ಇತ್ಯಾದಿ ದಿನ ಬಳಕೆಯ ವಸ್ತುಗಳನ್ನು ವಿತರಿಸಿದರು. ಸಕಾಲದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ನಿರ್ದೇಶಕರಾದ ಶ್ರೀ ಕಿರಣ್ ಉರ್ವ, ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ಶ್ರೀ ರಘುರಾಮ ಶೆಟ್ಟಿ ಪಟ್ಲಗುತ್ತು, ಬಂಟ್ವಾಳ ತಾಲೂಕು ವಿಸ್ತರಣಾಧಿಕಾರಿ ಶ್ರೀ ಸದಾಶಿವ ಅಳಿಕೆ, ಶ್ರೀ ಸುಬ್ರಾಯ […]

Read More

ಒಡಿಯೂರಿನಲ್ಲಿ ನಿಗದಿಪಡಿಸಿದ್ದ ತುಳು ಕಾವ್ಯ ರಚನಾ ಕಮ್ಮಟವನ್ನು ಮುಂದೂಡಲಾಗಿದೆ.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಎಪ್ರಿಲ್ 11 ಮತ್ತು 12ರ ಶನಿವಾರ ಮತ್ತು ಆದಿತ್ಯವಾರ ನಿಗದಿಪಡಿಸಿದ್ದ ತುಳು ಕಾವ್ಯ ರಚನಾ ಕಮ್ಮಟ(ತುಳು ಕಬಿತೆ ಕಟ್ಟುನ ಕಜ್ಜಕೊಟ್ಯ)ವನ್ನು ಕರೊನಾ ವೈರಸ್‍ನ ಪರಿಣಾಮ ಭಾರತ ಸರಕಾರದ ಅಧಿಸೂಚನೆಯಂತೆ ಮುಂದೂಡಲಾಗಿದೆ.

Read More

ತಮಸೋಮಾ ಜ್ಯೋತಿರ್ಗಮಯ – ಒಡಿಯೂರು ಶ್ರೀ

ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ ಕರೋನಾ ವೈರಸ್(ಕೋವಿಡ್-19) ಸೋಂಕಿನಿಂದ ಹಲವರು ಬಳಲುತ್ತಿದ್ದು, ಕೆಲವರು ಮೃತಪಟ್ಟಿರುವುದು ವಿಷಾಧನೀಯ. ಇದೀಗ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೈಗೊಂಡಿರುವ ಅತ್ಯಮೂಲ್ಯವಾದ ದೀಪ ಉರಿಸುವ ಕಾರ್ಯಕ್ರಮ ಪ್ರಶಂಸನೀಯ. ತ್ರೇತಾ, ದ್ವಾಪರ ಯುಗದಲ್ಲಿಯೂ ರಾಕ್ಷಸರ ತಾಮಸಗುಣವು ಹೆಚ್ಚಾದಾಗ ಅದರ ನಿವಾರಣೆಗೆ ಬೆಳಕನ್ನು ಹುಡುಕಿರುವುದು ಸಹಜ. ಇದಕ್ಕೆ ಪೂರಕವಾಗಿ ಕೋಟಿ ಕೋಟಿ ಜನರು ದೀಪ ಉರಿಸುವ ಮೂಲಕ ಭಗವದ್ ಪ್ರಾರ್ಥನೆಯೊಂದಿಗೆ ಬಲತುಂಬಿ ಅಂಧಕಾರವು ತೊಲಗಲಿ. ಸೂಚಿಸಿದ ಕೆಲವೊಂದು ವಿಚಾರಗಳಿಗೆ ಸ್ಪಂದಿಸಿ, ಜನರೆಲ್ಲಾ ಮನೆಗಳಲ್ಲಿಯೇ ಉಳಿದು, ಅಂತರವನ್ನು […]

Read More

ಜನತಾ ಕಫ್ರ್ಯೂ ಬೆಂಬಲಕ್ಕೆ ಒಡಿಯೂರು ಶ್ರೀ ಕರೆ:

ವಿಶ್ವವನ್ನೇ ಗಂಭೀರವಾಗಿ ಅಲ್ಲೋಲಕಲ್ಲೋಲಗೊಳಿಸಿರುವ ಕರೋನಾ(ಕೋವಿಡ್-19) ವೈರಸ್‍ನ ವಿರುದ್ಧ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀಯವರು ಕರೆ ನೀಡಿದ ಪ್ರಾಥಮಿಕ ಹಂತದ ಜನತಾ ಕಫ್ರ್ಯೂಗೆ ಭಾರತೀಯರು ಬೆಂಬಲಿಸಬೇಕು. ಆರೋಗ್ಯ ಮತ್ತು ಸ್ವಚ್ಛತೆಯನ್ನು ಕಾಪಿಡುವುದು ಎಲ್ಲರ ಕರ್ತವ್ಯವಾಗಿದೆ. ಎಲ್ಲರೂ ಪ್ರಾಮಾಣಿಕವಾದ ಸಹಕಾರದಿಂದ ಈ ಮಹಾಪಿಡುಗನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಸ್ವಯಂಪ್ರೇರಿತರಾಗಿ ಬದ್ಧತೆಯನ್ನು ಕಾಪಾಡಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಜನತೆಯಲ್ಲಿ ವಿನಂತಿಸಿದ್ದಾರೆ.

Read More

ವಿಶ್ವವು ಕರೋನಾ ಖಾಯಿಲೆಯಿಂದ ಮುಕ್ತವಾಗಲಿ – ಒಡಿಯೂರು ಶ್ರೀ

ಅಪರೂಪವಾಗಿ ಇಂತಹ ಹಲವಾರು ಸೋಂಕಿನ ಖಾಯಿಲೆಗಳು ಈ ಹಿಂದೆಯೂ ಕಾಡಿದೆ, ಈಗಲೂ ಕಾಡುತ್ತಿದೆ. ಮುನ್ನೆಚ್ಚರಿಕೆ ಅವಶ್ಯ. ಈ ಸಂದರ್ಭದಲ್ಲಿ ನಮ್ಮ ಭಾರತೀಯ ಪದ್ಧತಿಯ ಆಹಾರಗಳು, ಪ್ರಾಣಾಯಾಮದಂತಹ ಯೋಗಾಭ್ಯಾಸಗಳು, ಆಯುರ್ವೇದ ಹಾಗೂ ಇನ್ನಿತ್ಯಾದಿ ಅನುಕೂಲಕರವಾದಂತಹ ಔಷಧಿಗಳನ್ನು ಉಪಯೋಗ ಮಾಡುವುದರಿಂದ ನಿಯಂತ್ರಣ ಸಾಧ್ಯವಾಗಬಹುದು. ಕೆಲವೇ ದಿನಗಳಲ್ಲಿ ಈ ರೋಗವು ನಿಯಂತ್ರಣಕ್ಕೆ ಬರಲಿ ಎಂದು ಆರಾಧ್ಯದೇವರನ್ನು ಪ್ರಾರ್ಥಿಸುತ್ತೇವೆ.

Read More

ಒಡಿಯೂರಿನಲ್ಲಿ 2ದಿನಗಳ ತುಳು ಕಾವ್ಯ ರಚನಾ ಕಮ್ಮಟ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರ್ದ ತುಳುಕೂಟದ ಸಹಕಾರದೊಂದಿಗೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ಎಪ್ರಿಲ್ 11 ಮತ್ತು 12ರ ಶನಿವಾರ ಮತ್ತು ಆದಿತ್ಯವಾರ ಎರಡು ದಿನಗಳ ತುಳು ಕಾವ್ಯ ರಚನಾ ಕಮ್ಮಟ(ತುಳು ಕಬಿತೆ ಕಟ್ಟುನ ಕಜ್ಜಕೊಟ್ಯ)ವನ್ನು ಏರ್ಪಡಿಸಲಾಗಿದೆ. ಹಿರಿಯ ಕವಿ-ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರು ಶಿಬಿರದ ನಿರ್ದೇಶಕರಾಗಿದ್ದು, ತಜ್ಞರು ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವರು. ಕಾವ್ಯ ರಚನೆಯಲ್ಲಿ ಆಸಕ್ತರಾಗಿರುವ ಯುವಕ-ಯುವತಿಯರು ತಮ್ಮ ಪೂರ್ಣ ಅಂಚೆ ವಿಳಾಸ, ದೂರವಾಣಿ ಸಂಖ್ಯೆ, ಕೃತಿ ರಚನೆಯ […]

Read More

20ನೇ ತುಳು ಐಸಿರೊ ‘ತುಳು ಸಾಹಿತ್ಯ ಸಮ್ಮೇಳನ’ ಉದ್ಘಾಟಿಸಿ ಒಡಿಯೂರು ಶ್ರೀ ಆಶೀರ್ವಚನ

“ಮನೆ, ಮನೆಗಳಲ್ಲಿ ತುಳು ಭಾಷೆ ಮಾತನಾಡುವ ಮೂಲಕ ತುಳು ಮಾತೆಯ ಉತ್ಸವ ನಡೆಯಬೇಕು. ವಿಶ್ವವಿದ್ಯಾನಿಲಯಗಳಲ್ಲಿ ತುಳು ಭಾಷೆಗೆ ಮಾನ್ಯತೆ ಸಿಕ್ಕಿರುವುದರಿಂದ ತುಳುವಿನ ಭವಿಷ್ಯ ಭದ್ರವಾಗಿದೆ. ತುಳುವರು ಕಾರ್ಯಕ್ಕೆ ಇಳಿದಾಗ ಮಾತ್ರ ನಮ್ಮ ತುಳು ಭಾಷೆಯು 8ನೇ ಪರಿಚ್ಛೇದಕ್ಕೆ ಸೇರಲು ಸಾಧ್ಯ. ಆನಂದದ ಮೂಲ ತ್ಯಾಗದಲ್ಲಿದೆ. ತ್ಯಾಗದಲ್ಲಿ ಮಾತ್ರ ಆನಂದದ ಅನುಭವವಿದೆ. ತುಳುವರಲ್ಲಿ ಹೃದಯ ಸಿರಿವಂತಿಕೆ ಇದೆ” ಎಂದು 20ನೇ ತುಳು ಐಸಿರೊ ‘ತುಳು ಸಾಹಿತ್ಯ ಸಮ್ಮೇಳನ’ವನ್ನು ಉದ್ಘಾಟಿಸಿ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಶೀರ್ವಚನಗೈದರು. ಸಾಧ್ವಿ […]

Read More

ಒಡಿಯೂರಿನಲ್ಲಿ ನಡೆದ ಉಚಿತ ನೇತ್ರ ತಪಸಣಾ ಮತ್ತು ಚಿಕಿತ್ಸಾ ಶಿಬಿರ

ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ, ಇವರ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ಸ್ […]

Read More

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top