+91 8255-266211
info@shreeodiyoor.org

ಒಡಿಯೂರಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ


ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ, ಇವರ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ಸ್ ಬೆಂಗಳೂರು, ಎಸ್ಸಿಲೋರ್ ವಿಷನ್ ಫೌಂಡೇಶನ್, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ದಶಂಬರ 29ನೇ ಆದಿತ್ಯವಾರ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಯೋಜಿಸಲಾಗಿದೆ.

ಈ ಶಿಬಿರವನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಕರೋಪಾಡಿ ಗ್ರಾಮ ಪಂಚಾಯತ್‍ನ ಅಧ್ಯಕ್ಷೆ ಶ್ರೀಮತಿ ಬೇಬಿ ಆರ್. ಶೆಟ್ಟಿ, ಬೆಂಗಳೂರು ವಿಷನ್ ಫೌಂಡೇಶನ್‍ನ ಶ್ರೀ ಧರ್ಮಪ್ರಸಾದ್ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಲ| ಎ. ಸುರೇಶ್ ರೈ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಶ್ರೀಮತಿ ಸರ್ವಾಣಿ ಪಿ. ಶೆಟ್ಟಿ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಶ್ರೀ ಕಿರಣ್ ಉರ್ವ, ಯೋಜನೆಯ ಕರೋಪಾಡಿ ಗ್ರಾಮಸಮಿತಿಯ ಅಧ್ಯಕ್ಷ ಶ್ರೀ ರಘುನಾಥ ಶೆಟ್ಟಿ ಪಟ್ಲಗುತ್ತು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

* ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು ಹಾಗೂ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುವುದು.
* ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಗೊತ್ತುಪಡಿಸಿದ ದಿನಾಂಕದಂದು ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.
* ಅರ್ಹರಿಗೆ ಉಚಿತ ಕನ್ನಡಕಗಳನ್ನು ನೀಡಲಾಗುವುದು.

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top