ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಬೆಂಗಳೂರು ಘಟಕದ ವಾರ್ಷಿಕೋತ್ಸವ-ಗುರುವಂದನಾ ಕಾರ್ಯಕ್ರಮವು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ತಾ.07-10-2018ನೇ ರವಿವಾರ ಸಂಜೆ ಘಂಟೆ 5.00ರಿಂದ ಬೆಂಗಳೂರು ನಗರದ ವಿಜಯ ಬ್ಯಾಂಕ್ ಲೇಔಟ್ನಲ್ಲಿರುವ ಮೂಲ್ಕಿ ಸುಂದರರಾಮ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾದ ಡಾ| ಟಿ. ಶ್ಯಾಮ ಭಟ್, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರರಾದ ಶ್ರೀ ಸದಾನಂದ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಉಪೇಂದ್ರ ಶೆಟ್ಟಿ, ಕುಶಿ ಬಯೋಟೆಕ್ ಆಡಳಿತ ನಿರ್ದೇಶಕರಾದ ಶ್ರೀ ಉಷಾಕುಮಾರ್ ಶೆಟ್ಟಿ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಪ್ರಧಾನ ಕಾರ್ಯದರ್ಶಿ ಶ್ರೀ ನಗ್ರಿಗುತ್ತು ರೋಹಿತ್ ಡಿ. ಶೆಟ್ಟಿ, ಶ್ರೀ ಕರ್ನಲ್ ಎ.ಜೆ. ಭಂಡಾರಿ, ಶ್ರೀ ರಮಾಕಾಂತ ಶೆಟ್ಟಿ, ಶ್ರೀ ವಿರೂಪಾಕ್ಷ ಶೆಟ್ಟಿ, ಶ್ರೀ ದಿವಾಕರ ಶೆಟ್ಟಿ ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಯಕ್ಷಗಾನ ಭಾಗವತ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ‘ಕಂಸ ವಿವಾಹ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.