Date : Monday, 15-02-2021
Invitation
Date : Friday, 04-09-2020
“ಶ್ರೀ ಕೃಷ್ಣ ಸಂಸ್ಕೃತಿಯ ದ್ಯೋತಕ. ಸಂಸ್ಕೃತಿಯ ಬೆಳಕು ರಾಮ-ಕೃಷ್ಣರು. ಮಕ್ಕಳನ್ನು ಸಂಸ್ಕೃತಿಯ ಉಳಿವಿನ ಹರಿಕಾರರನ್ನಾಗಿ ಬೆಳೆಸಬೇಕು. ಆ ಮೂಲಕ ಭವ್ಯ ಭಾರತ ನಿರ್ಮಾಣದ ಭವಿಷ್ಯ ಬರೆಯುವಂತಾಗಬೇಕು. ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ತಮ್ಮ ತಮ್ಮ ಮನೆಯಲ್ಲೇ ಆಚರಿಸಿ ಸಂಭ್ರಮಿಸಿಬೇಕೆಂದು” ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಸಂದೇಶದಂತೆ ಒಂದು ನಿಮಿಷದ ಮುದ್ದುಕೃಷ್ಣ ವೇಷದ ವಿಡಿಯೋ ಕಳುಹಿಸುವ ಮೂಲಕ ನಾಲ್ಕು ವರ್ಷದೊಳಗಿನ ಪುಟ್ಟ ಮಕ್ಕಳಿಗೆ ಮುದ್ದು ಕೃಷ್ಣವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸುಮಾರು 150 ಪುಟಾಣಿಗಳು ಭಾಗವಹಿಸಿದ […]
Date : Wednesday, 12-08-2020
ಕೃಷ್ಣ ಸಂಸ್ಕೃತಿಯ ದ್ಯೋತಕ. ಸಂಸ್ಕೃತಿಯ ಬೆಳಕು ರಾಮ-ಕೃಷ್ಣರು. ಮಕ್ಕಳನ್ನು ಸಂಸ್ಕೃತಿಯ ಉಳುವಿನ ಹರಿಕಾರರನ್ನಾಗಿ ಬೆಳೆಸಬೇಕು. ಆ ಮೂಲಕ ಭವ್ಯ ಭಾರತ ನಿರ್ಮಾಣದ ಭವಿಷ್ಯ ಬರೆಯುವಂತಾಗಬೇಕು. ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಗುರುಬಂಧುಗಳು ತಮ್ಮ ತಮ್ಮ ಮನೆಯಲ್ಲೇ ಆಚರಿಸಿ ಸಂಭ್ರಮಿಸಬೇಕೆಂದು ಒಡಿಯೂರು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂದೇಶ ನೀಡಿದ್ದಾರೆ. ಶ್ರೀ ಸಂಸ್ಥಾನದಲ್ಲಿ ಮುದ್ದುಕೃಷ್ಣ ವೇಷಧಾರಿ ಮಕ್ಕಳ ವೀಡಿಯೋ ಮೂಲಕ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುವುದು. ಆಗಸ್ಟ್ 11, 2020ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ನಾಲ್ಕು ವರುಷದೊಳಗಿನ […]
Date : Monday, 03-08-2020
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ-ಮಹಾಭಾರತ ಸಂಸ್ಕøತಿಯ ಕಣ್ಣುಗಳಿದ್ದಂತೆ. ‘ರಾಮ’ ಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ತ್ವಗಳ ಚಿಂತನೆಯು ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿ ‘ರಾಮ’ ಎನ್ನಲು ಅನುಕೂಲವಾದುದು. ‘ಆ ಮಂತ್ರ ಈ ಮಂತ್ರ ಜಪಿಸಿ ನೀ ಕೆಡಬೇಡ, ರಾಮ ಮಂತ್ರವ ಜಪಿಸೋ…’ ಎಂದು ದಾಸರು ಕೊಂಡಾಡಿದ್ದಾರೆ. ಸಾಕ್ಷಾತ್ ಶಿವನೇ […]
Date : Tuesday, 28-07-2020
“ದತ್ತ ಸಂಪ್ರದಾಯದಲ್ಲಿ ಶ್ರೀ ಗುರುಪಾದುಕಾರಾಧನೆಗೆ ವಿಶೇಷವಾದ ಮಹತ್ವವಿದೆ. ಅಜ್ಞಾನ ಎಂಬ ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವನೇ ಗುರು. ಗುರುವಿನ ಅನುಗ್ರಹದಿಂದ ಬದುಕು ಹಸನಾಗಲು ಸಾಧ್ಯ. ಬದುಕನ್ನು ಆರೋಗ್ಯವಾಗಿಡುವುದು ಹೇಗೆ ಸಾಧ್ಯ ಎಂಬುದನ್ನು ಆಯುರ್ವೇದವು ತಿಳಿಸಿದೆ. ಪರೋಪಕಾರದ ಬದುಕು ಶ್ರೇಷ್ಠವಾಗಿದ್ದು, ಸುಖ-ದುಃಖಗಳಿಂದ ಕೂಡಿರುವುದು ನಿಜವಾದ ಬದುಕು. ಸುಖ-ದುಃಖಗಳನ್ನು ಸೋಪಾನವಾಗಿಸಿದಾಗ ಗುರಿ ತಲುಪಲು ಸಾಧ್ಯ. ಭಾರತೀಯ ಪರಂಪರೆ, ಸಂಸ್ಕೃತಿಯ ಜಾಗೃತಿಗೆ ಪರಿಸ್ಥಿತಿ ಸಕಾಲವಾಗಿದೆ. ಭಾಷೆ, ಸಂಸ್ಕೃತಿಗೆ ಹೆಚ್ಚಿನ ಮಹತ್ವ ನೀಡಬೇಕು. ಧನಾತ್ಮಕ ಅಂಶಗಳನ್ನು ಮೈಗೂಡಿಸಿ, ಋಣಾತ್ಮಕ ಅಂಶಗಳನ್ನು ದೂರಾಗಿಸಬೇಕು. ಭಗವಂತನು […]
Date : Monday, 06-07-2020
ಆಷಾಢ ಮಾಸವೆಂದರೆ ವಿಶೇಷವಾದ ತಿಂಗಳು ಎಂದರ್ಥ. ಆಷಾಢ ಪೂರ್ಣಿಮೆಯು ವ್ಯಾಸ ಪೂರ್ಣಿಮೆಯೆಂದೇ ಪ್ರತೀತಿ. ಗುರುಗಳನ್ನು ಪೂಜಿಸುವ ಮಾಸವಿದು. ಅರ್ಥಾತ್ ಗುರು ಮಾಸವಿದು. ಅಧ್ಯಾತ್ಮ ಸಾಧಕರಿಗೆ ಪರಮಪವಿತ್ರವೂ ಹೌದು. ಅಜ್ಞಾನದ ಬದುಕಿಗೆ ಸುಜ್ಞಾನದ ಬೆಳಕನ್ನು ನೀಡಿ ಮುನ್ನಡೆಸುವ ಗುರುವಿನ ಅನಿವಾರ್ಯತೆ ಇದೆ. ಅದಕ್ಕಾಗಿಯೇ ಈ ದಿನದಲ್ಲಿ ಗುರುಪೂಜೆಗಳು ನಡೆಯುತ್ತದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಬೋಧಿಸಿದಂತೆ ಗುಣಗಳಿಗೆ ತಕ್ಕಂತೆ ಮನಸ್ಸನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದಾನೆ. ಸದ್ಗುಣಗಳನ್ನು ದೈವೀ ಸಂಪತ್ತು ಎಂದೂ, ದುರ್ಗುಣಗಳನ್ನು ಅಸುರೀ ಸಂಪತ್ತು ಎಂದು ಸೂಚಿಸಿದ್ದಾನೆ. ನಾವೆಲ್ಲ ಸಾಧ್ಯವಾದಷ್ಟು ದೈವೀ […]
Date : Saturday, 22-02-2020
“ಮನೆ, ಮನೆಗಳಲ್ಲಿ ತುಳು ಭಾಷೆ ಮಾತನಾಡುವ ಮೂಲಕ ತುಳು ಮಾತೆಯ ಉತ್ಸವ ನಡೆಯಬೇಕು. ವಿಶ್ವವಿದ್ಯಾನಿಲಯಗಳಲ್ಲಿ ತುಳು ಭಾಷೆಗೆ ಮಾನ್ಯತೆ ಸಿಕ್ಕಿರುವುದರಿಂದ ತುಳುವಿನ ಭವಿಷ್ಯ ಭದ್ರವಾಗಿದೆ. ತುಳುವರು ಕಾರ್ಯಕ್ಕೆ ಇಳಿದಾಗ ಮಾತ್ರ ನಮ್ಮ ತುಳು ಭಾಷೆಯು 8ನೇ ಪರಿಚ್ಛೇದಕ್ಕೆ ಸೇರಲು ಸಾಧ್ಯ. ಆನಂದದ ಮೂಲ ತ್ಯಾಗದಲ್ಲಿದೆ. ತ್ಯಾಗದಲ್ಲಿ ಮಾತ್ರ ಆನಂದದ ಅನುಭವವಿದೆ. ತುಳುವರಲ್ಲಿ ಹೃದಯ ಸಿರಿವಂತಿಕೆ ಇದೆ” ಎಂದು 20ನೇ ತುಳು ಐಸಿರೊ ‘ತುಳು ಸಾಹಿತ್ಯ ಸಮ್ಮೇಳನ’ವನ್ನು ಉದ್ಘಾಟಿಸಿ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಶೀರ್ವಚನಗೈದರು. ಸಾಧ್ವಿ […]
Date : Friday, 07-02-2020
“ಕೃಷಿ ಸಂಸ್ಕøತಿ-ಋಷಿ ಸಂಸ್ಕøತಿ ಸಮಾನವಾಗಿ ಸಾಗಬೇಕು. ಆತ್ಮತತ್ತ್ವ ಮಾತ್ರವೇ ಸತ್ಯ. ಜೀವನ ರಥದ ಪಥವೇ ಧರ್ಮ. ಆಗ ಉದ್ದೇಶಿತ ಗುರಿ ತಲಪಲು ಸಾಧ್ಯ. ಆತ್ಮೋನ್ನತಿಯ ಕಡೆಗೆ ಜೀವನರಥವನ್ನು ಎಳೆಯಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜರಗಿದ ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆಯ ಧರ್ಮಸಭೆಯನ್ನು ಉದ್ಘಾಟಿಸಿ ಆಶೀರ್ವಚನವಿತ್ತರು. ವೇದಿಕೆಯಲ್ಲಿ ಪರಮಪೂಜ್ಯ ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿಯವರು ಆಶೀರ್ವಚನಗೈದು ಆತ್ಮಶಕ್ತಿ ಉದ್ದೀಪನದ ಉದ್ದೇಶವನ್ನಿರಿಸಿಕೊಂಡು ಶ್ರೀ ಸಂಸ್ಥಾನದಲ್ಲಿ ಪಂಚಪರ್ವಗಳನ್ನು ಶ್ರೀಗಳ ಮಾರ್ಗದರ್ಶನದಂತೆ ನಡೆಸಲಾಗುತ್ತಿದೆ” ಎಂದರು. […]
Date : Monday, 28-10-2019
ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕು.ದೀಪಶ್ರೀ 9ನೇ ತರಗತಿ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಸಂಸ್ಕೃತ ಭಾಷಣದಲ್ಲಿ ಪ್ರಥಮ ಬಹುಮಾನ ಪಡೆದು ದ.ಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ
‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’