Date : Thursday, 09-04-2020
“ನಿಮಗೆಲ್ಲ ಹನುಮಜ್ಜಯಂತಿಯ ಶುಭಾಶಯಗಳು. ಭಾರತದ ಪ್ರಸಿದ್ಧ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಭಾರತೀಯ ಸಂಸ್ಕೃತಿಯ ನಯನಗಳು. ಇವು ಅರ್ಥಪೂರ್ಣವಾಗಿ, ಆರೋಗ್ಯಪೂರ್ಣವಾಗಿ ಬದುಕನ್ನು ರೂಪಿಸುವ ಪಠ್ಯಗಳಿದ್ದಂತೆ. ಭಾವೀ ಬ್ರಹ್ಮನೆನಿಸಿದ ಚಿರಂಜೀವಿ ಹನುಮಂತನ ವಿಶೇಷತೆಗಳನ್ನು ರಾಮಾಯಣ ಮಹಾಕಾವ್ಯದ ಸುಂದರಕಾಂಡದಲ್ಲಿ ನೋಡಬಹುದು. ಇಷ್ಟಾರ್ಥ ಸಿದ್ಧಿಗಾಗಿ ಸುಂದರಕಾಂಡ ಪಾರಾಯಣ ಮಾಡುವಂತದ್ದು ಪ್ರತೀತಿ. ‘ಸುಂದರ’ ಅಂದರೆ ಚೆನ್ನಾಗಿರುವವ ಎಂದರ್ಥವಾದರೂ ಅಂತರಂಗ-ಬಹಿರಂಗವನ್ನು ಸುಂದರವಾಗಿರಿಸಿಕೊಂಡವ. ಅಧ್ಯಾತ್ಮದ ವಿಚಾರಗಳನ್ನು ಅನುಭವ ಮಾಡುವವರಿಗೆ ಹನುಮಂತನೇ ಮಾರ್ಗದರ್ಶಿ. ಜ್ಞಾನದ ಹಸಿವಿರುವವರಿಗೆ ಆತ್ಮಜ್ಞಾನದ ಆಹಾರ ಕೊಡಿಸುವವ ಆಂಜನೇಯ. ಮಾತುಗಳ ಮಧುರತೆ, ವ್ಯಾಕರಣ ಶುದ್ಧವಾದ […]
Read More
Date : Friday, 27-03-2020
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪ್ರತಿವರ್ಷದಂತೆ ನಿಗದಿಪಡಿಸಿದ್ದ ‘ಶ್ರೀ ಹನುಮೋತ್ಸವ’ ತತ್ಸಂಬಂಧ ಹಮ್ಮಿಕೊಂಡ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ಭಾರತ ಸರಕಾರವು ಹೊರಡಿಸಿರುವ ಅಧಿಸೂಚನೆಯಂತೆ ಮುಂದೂಡಲಾಗಿದೆ.
Read More
Date : Thursday, 19-03-2020
Read More
Date : Thursday, 12-03-2020
Read More
Date : Saturday, 22-02-2020
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶತರುದ್ರಾಭಿಷೇಕ ಜರಗಿತು.
Read More
Date : Saturday, 22-02-2020
ಹೂವಿನಹಡಗಲಿ: “ಎಲ್ಲಾ ಸಂಪತ್ತಿಗಿಂತ ಮಿಗಿಲಾದ ವಿಶೇಷ ಸಂಪತ್ತು ಆತ್ಮಜ್ಞಾನದ ಸಂಪತ್ತು. ಜ್ಞಾನದ ಹಸಿವು ನಮಗೆ ನಿರಂತರ ಆಗಬೇಕು. ಅದಕ್ಕೆ ಆಹಾರವೇ ಆತ್ಮಜ್ಞಾನ. ಅದನ್ನು ಸಂಪಾದನೆ ಮಾಡಲು ಮುಂದುವರಿದರೆ ಎಲ್ಲವೂ ಗೌಣವಾಗುತ್ತದೆ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಶೀರ್ವಚನಗೈದರು. ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಹೂವಿನಹಡಗಲಿ (ಮಲ್ಲಿಗೆನಾಡು) ಘಟಕದ ನಾಲ್ಕನೇ ವಾರ್ಷಿಕೋತ್ಸವ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಹೂವಿನಹಡಗಲಿ ಘಟಕದ ಪ್ರಥಮ ವಾರ್ಷಿಕ ಹಬ್ಬದ ಧರ್ಮಸಭೆಯಲ್ಲಿ ಸಂದೇಶ ನೀಡಿದ ಪೂಜ್ಯ ಶ್ರೀಗಳವರು […]
Read More
Date : Thursday, 20-02-2020
ಶ್ರೀ ಸಂಸ್ಥಾನದಲ್ಲಿ ತಾ. 21-02-2020ನೇ ಶುಕ್ರವಾರ ರಾತ್ರಿ ಮಹಾ ಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಆರಾಧ್ಯ ದೇವರಿಗೆ ಶತರುದ್ರಾಭಿಷೇಕ ನಡೆಯಲಿರುವುದು. ತಾವೆಲ್ಲರೂ ಪಾಲ್ಗೊಂಡು ಆರಾಧ್ಯ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷೆ. ಸೇವೆ ಮಾಡಲಿಚ್ಛಿಸುವವರು ಶ್ರೀ ಸಂಸ್ಥಾನದ ಸೇವಾವಿಭಾಗದಲ್ಲಿ ಹೆಸರು ನೋಂದಾಯಿಸಬಹುದು.
Read More
Date : Monday, 30-12-2019
ವಿಶ್ವವಂದ್ಯ, ವಿಶ್ವಸಂತ, ಉಡುಪಿ ಅಷ್ಟಮಠದ ಹಿರಿಯ ಯತಿಶ್ರೇಷ್ಠರಾದ ಪೂಜ್ಯ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಕೃಷ್ಣೈಕ್ಯರಾದುದು ಭಾರತೀಯ ಸನಾತನ ಪರಂಪರೆಗೆ ತುಂಬಲಾರದ ನಷ್ಟ. ಲೋಕೋದ್ಧಾರದ ಚುಕ್ಕಾಣಿ ಹಿಡಿದು, ಸಮನ್ವಯತೆಯ ಹರಿಕಾರರಾಗಿ ಆಧ್ಯಾತ್ಮಿಕ ಪರಿವ್ರಾಜಕರಾಗಿದ್ದ ಪೂಜ್ಯ ಶ್ರೀಗಳವರು ಅಗಲಿರುವುದು ತುಂಬಾ ದುಃಖವನ್ನುಂಟು ಮಾಡಿದೆ ಎಂದು ಒಡಿಯೂರು ಶ್ರೀಗಳವರು ಸಂತಾಪ ವ್ಯಕ್ತಪಡಿಸಿದ್ದಾರೆ.
Read More
Date : Friday, 13-12-2019
“ಭಗವಂತನ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಅಲೌಕಿಕ ಬದುಕು ಉನ್ನತಿಯನ್ನು ಸಾಧಿಸುತ್ತದೆ. ಲೌಕಿಕ ಬಂಧನದಿಂದ ಬಿಡುಗಡೆಗೊಂಡರೆ ಅದುವೇ ಮೋಕ್ಷ. ಬದುಕು ಸತ್ವಪೂರ್ಣವಾಗಿರಬೇಕು. ಧರ್ಮಯುಕ್ತವಾಗಿರಬೇಕು. ಪ್ರಪಂಚವೇ ನಮಗೆ ಪಾಠಶಾಲೆ. ಶ್ರೀ ಗುರುಚರಿತ್ರೆ ಅಮೃತವನ್ನು ಸವಿಯುವಂತೆ ಮಾಡುತ್ತದೆ. ಗುರುದತ್ತಾತ್ರೇಯರ ತತ್ತ್ವಗಳನ್ನು ನಮ್ಮೊಳಗೆ ಅನುಷ್ಠಾನಿಸಬೇಕು. ಆಗ ಭಗವಂತನ ಪ್ರೀತಿಗೆ ಪಾತ್ರರಾಗಲು ಸಾಧ್ಯ. ಹೃದಯದಲ್ಲಿ ದೃಢತೆ ಇದ್ದಾಗ ಕಾರ್ಯ ಸಾಧನೆಯಾಗುತ್ತದೆ. ಭಗವಂತನ ಕಲ್ಯಾಣಗುಣಗಳನ್ನು ಮೈಗೂಡಿಸಿಕೊಂಡಾಗ ಆಚರಣೆಗಳು ಅರ್ಥಪೂರ್ಣವಾಗುತ್ತದೆ. ತನ್ನನ್ನು ತಾನು ಅರಿತುಕೊಂಡಾಗ ಜಗತ್ತನ್ನೇ ಗೆಲ್ಲಬಹುದು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ […]
Read More
Date : Friday, 13-12-2019
“ಬೋಗದ ಬದುಕು ನಿಜಾರ್ಥದ ಬದುಕಲ್ಲ. ತ್ಯಾಗದಿಂದ ಕೂಡಿದ್ದರೆ ಮಾತ್ರ ಬದುಕು ಸಾರ್ಥಕವೆನಿಸುತ್ತದೆ. ಸಮರಸ ತತ್ತ್ವವೆನಿಸಿದ ಗುರುತತ್ತ್ವ ಪ್ರತಿಯೊಬ್ಬರ ಬದುಕಿನಲ್ಲಿಯೂ ಅನುಷ್ಠಾನವಾಗಬೇಕಿದೆ. ಸಮುದ್ರದ ವಾತಾವರಣ ವ್ಯತ್ಯಯವಾದಾಗ ಸುನಾಮಿಗಳು ಏಳುವಂತೆ ನಮ್ಮ ಶರೀರದಲ್ಲಿ ಕಾಮ, ಕ್ರೋಧಗಳು ಅಧಿಕವಾದಾಗಲೂ ತ್ರಿಕರಣಾದಿಯಾಗಿ ಎಲ್ಲವೂ ಏರುಪೇರಾಗಬಹುದು. ಬದುಕಿನ ಅಥ್ ಅರಿವಾದಾಗ ನಾವು ಉತ್ತಮರಾಗುತ್ತೇವೆ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ದತ್ತ ಜಯಂತ್ಯುತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹ ಸಂದರ್ಭ ಭಗವದ್ಭಕ್ತರಿಗೆ ಶ್ರೀ ದತ್ತ ಮಾಲಾಧಾರಣೆಗೈದು ಆಶೀರ್ವಚನಗೈದರು. […]
Read More