ತಾ. 28/07/2018ನೇ ಶನಿವಾರದಂದು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ’ಸ್ವಚ್ಛ ಗೆಳತಿ ಋತು ಸ್ರಾವ ಜಾಗೃತಿ’ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಚಂದ್ರಿಕಾ ಹಾಗೂ ಶ್ರೀಮತಿ ಸಂಗೀತಾ ಇವರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ರೇಣುಕಾ ಎಸ್. ರೈ, ಸಹಶಿಕ್ಷಕಿಯರಾದ ಶ್ರೀಮತಿ ನಿವೇದಿತಾ, ಶ್ರೀಮತಿ ಭಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿಜ್ಞಾನ ಶಿಕ್ಷಕಿಯರಾದ ಶ್ರೀಮತಿ ಅನಿತಾ, ಕು. ಸವಿತಾ ಇವರು ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿಯರಿಗೆ ಋತುಸ್ರಾವ ಮತ್ತು ತ್ಯಾಜ್ಯ ವಿಲೇವಾರಿ ಹಾಗೂ ಹದಿಹರೆಯದ ಸಮಸ್ಯೆಯ ಬಗ್ಗೆ ಪೂರ್ಣವಾದ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮವನ್ನು ಶ್ರೀಮತಿ ಅನಿತಾ ಸ್ವಾಗತಿಸಿ, ಕು. ವಿದ್ಯಾಲಕ್ಷ್ಮಿ ಧನ್ಯವಾದ ಸಮರ್ಪಿಸಿದರು.