ಒಡಿಯೂರು ಶ್ರೀ ಗುರುದೇವ ಕೈಗಾರಿಕಾ ತರಬೇತಿ ಸಂಸ್ಥೆ, ಕನ್ಯಾನ ಇಲ್ಲಿ ಆಯುಧ ಪೂಜಾ ಕಾರ್ಯಕ್ರಮವನ್ನು ಭಕ್ತಿ ಭಾವಗಳಿಂದ ಆಚರಿಸಲಾಯಿತು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಸಾದ್ವಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತರಿದ್ದು ಮಕ್ಕಳಲ್ಲಿ ಸೌಹಾರ್ದತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಮತ ಧರ್ಮಗಳ ವಿದ್ಯಾರ್ಥಿಗಳು ಸೇರಿಕೊಂಡು ಅಚ್ಚುಕಟ್ಟಾಗಿ ಆಯುಧಾ ಪೂಜೆಯನ್ನು ನೆರವೇರಿಸುತ್ತಿರುವುದು ಆದರ್ಶವಾಗಿದೆ ಎಂದರು. ಸಂಸ್ಥೆಯ ಎಲ್ಲಾ ಕಾರ್ಯಗಾರಗಳಿಗೆ ಮತ್ತು ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ಕರುಣಾಕರ ಎನ್.ಬಿ, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಧನ್ಯತಾಭಾವದಿಂದ ಪರಸ್ಪರ ಶುಭಾಶಯಗಳನ್ನು ಹಂಚಿಕೊಂಡರು.