ಒಡಿಯೂರು ಶ್ರೀ ಗುರುದೇವ ಕೈಗಾರಿಕಾ ತರಬೇತಿ ಸಂಸ್ಥೆ, ಕನ್ಯಾನ ಇಲ್ಲಿ ಸರ್ ಎಮ್.ವಿಶ್ವೇಶ್ವರಯ್ಯ ರವರ ಜನ್ಮ ದಿನದ ಪ್ರಯುಕ್ತ ಇಂಜಿನಿಯರ್ಸ್ ಡೇ ಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಒಡಿಯೂರು ಕ್ಷೇತ್ರದ ಸಂಚಾಲಕರು ಹಾಗೂ ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕರಾದ ಶ್ರೀ ತಾರಾನಾಥ ಕೊಟ್ಟಾರಿ ಯವರು ಅಧ್ಯಕ್ಷ ಸ್ಥಾನವನ್ನು ವಹಿಸಿ ಇಂಜಿನಿಯರ್ಸ್ ಡೇ ಯ ಶುಭಾಶಯವನ್ನು ಕೋರಿ, ಸರ್.ಎಮ್.ವಿ ಯವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ವಿವರಿಸುತ್ತಾ, ಅವಕಾಶಗಳನ್ನು ಸದುಪಯೋಗ ಮಾಡಿ ಎಲ್ಲರೂ ಅದನ್ನು ಅನುಸರಿಸಬೇಕೆಂದು ಮನದಟ್ಟು ಮಾಡಿದರು.ಮುಖ್ಯ ಅಥಿತಿಯಾಗಿ ಆಗಮಿಸಿದ ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಯಾದ ಶ್ರೀ ಹರೀಶ್ ಕೋಟ್ಯಾನ್ ಮಾತನಾಡುತ್ತ sಸರ್.ಎಮ್.ವಿ ಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ನಿಯಮಿತ ದ ನಿರ್ದೇಶಕರಾದ ಶ್ರೀ ಲಿಂಗಪ್ಪ ಗೌಡ ಪನೆಯಡ್ಕ, ಸಂಸ್ಥೆಯ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತಿಯಿದ್ದರು.
ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಕರುಣಾಕರ್ ಎನ್.ಬಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಶರತ್ ಕುಮಾರ್ ವಂದಿಸಿದರು,ಧೀರಜ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.