+91 8255-266211
info@shreeodiyoor.org

ಶ್ರೀ ಗುರುದೇವ ಗುರುಕುಲ-ಬೇಡಗುಡ್ಡೆ ಶಾಖೆಯ ಉದ್ಘಾಟನೆ

ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ.ಭಾರತೀಯ ಸಂಸ್ಕೃತಿಯನ್ನು ಮಕ್ಕಳಲ್ಲಿ ಬೆಳೆಸಿ ಉಳಿಸುವ ಕೆಲಸವಾಗಬೇಕು ಎಂದು ಪರಮಪೂಜ್ಯ ಸಾಧ್ವಿ ಶ್ರೀ ಮಾತಾನಂದಮಯಿಯವರು ಒಡಿಯೂರು ಶ್ರೀ ಗುರುದೇವ ಗುರುಕುಲ (LKG ಮತ್ತು UKG) ಬೇಡಗುಡ್ಡೆ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನವಿತ್ತರು.

ಮುಖ್ಯ ಅತಿಥಿಗಳಾಗಿ ಕರೋಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಆಗ್ನೇಶ್ ಡಿ.ಸೋಜ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶಾಲಾ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ಶ್ರೀ ಬಿ.ಕೆ.ಚಂದ್ರಶೇಖರ್, ಶ್ರೀ ಹೆಚ್.ಕೆ. ಪುರುಷೋತ್ತಮ್, ಶ್ರೀ ವೇಣುಗೋಪಾಲ ಮಾರ್ಲ, ಶ್ರೀ ಜಯಂತ್ ಜೆ. ಕೋಟ್ಯಾನ್, ಶ್ರೀ ಶಿವಪ್ರಸಾದ್ ಶೆಟ್ಟಿ ಅನೆಯಾಲ ಮಂಟಮೆ ಮತ್ತು ಕಟ್ಟಡ ಮ್ಹಾಲಕ ಶ್ರೀ ಸುಬ್ರಾಯ ಉಪಸ್ಥಿತರಿದ್ದರು. ಗುರುಕುಲದ ಮಾತಾಜಿ ಕು. ಭವ್ಯಾ ಪ್ರಾರ್ಥಿಸಿದರು. ಶಾಲಾ ಸಂಚಾಲಕರಾದ ಶ್ರೀ ಸೇರಾಜೆ ಗಣಪತಿ ಭಟ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಶ್ರೀ ಗುರುದೇವ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಜಯಪ್ರಕಾಶ್ ಶೆಟ್ಟಿ ಎ. ಕಾರ್ಯಕ್ರಮ ನಿರ್ವಹಿಸಿದರು. ಶ್ರೀ ಸುಬ್ರಾಯ ಅವರು ವಂದಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top