ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಒಡಿಯೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಂಜುನಾಥ್ 10 ನೇ ತರಗತಿ ತುಳುಭಾಷಣ, ಆಶು ಭಾಷಣ ಮತ್ತು ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಮೂರು ಬಹುಮಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.ತಾಲೂಕು ಮಟ್ಟದ ಸಂಸ್ಕೃತ ಭಾಷಣದಲ್ಲಿ ಮಹೇಶ್ ಟಿ 9ನೇ ತರಗತಿ ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾನೆ.