ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕರೋಪಾಡಿ ಗ್ರಾಮ ಸಮಿತಿ ಅಧ್ಯಕ್ಷ ರಘುನಾಥ ಶೆಟ್ಟಿ ಪಟ್ಲ ಇವರು ಜನವರಿ 26ನೇ ಶನಿವಾರ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಸಂಚಾಲಕರಾದ ಸೇರಾಜೆ ಗಣಪತಿ ಭಟ್ ಮಾತನಾಡಿ ರಾಷ್ಟ್ರೀಯತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನ ಬಾಲ್ಯದಲ್ಲಿಯೇ ನಡೆಯಬೇಕು ಎಂದರು. ಶಾಲಾ ಮುಖ್ಯಶಿಕ್ಷಕ ಜಯಪ್ರಕಾಶ್ ಶೆಟ್ಟಿ ಎ ಸ್ವಾಗತಿಸಿ ವಂದಿಸಿದರು. ಪ್ರಾಥಮಿಕ ಶಾಲಾಶಿಕ್ಷಕಿ ರೇಣುಕಾ ಎಸ್ ರೈ, ಮತ್ತು ಶಿಕ್ಷಕರು, ಶಿಕ್ಷಕರೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.