+91 8255-266211
info@shreeodiyoor.org

ಕೇರಳ ನೆರೆ ಸಂತ್ರಸ್ತರಿಗೆ ಪರಿಹಾರಧನ ಹಸ್ತಾಂತರ

 

ಕೇರಳದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಯಿಂದಾದ ತೊಂದರೆಗಳಿಗೆ ಪರಿಹಾರಾರ್ಥವಾಗಿ ರೂಪಾಯಿ ಒಂದು ಲಕ್ಷದ ಚೆಕ್ಕನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯು ಸಮರ್ಪಿಸಿದ, ಶ್ರೀ ಗುರುದೇವ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್(ರಿ.)ನ ಮೂಲಕ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ತಿರುವನಂತಪುರ ಘಟಕದ ಅಧ್ಯಕ್ಷರು, ಚೆಂಗನ್ನೂರು ಪ್ರಾದೇಶಿಕ ಸಾರಿಗೆ ಸಹಾಯಕ ಅಧಿಕಾರಿ ಶ್ರೀ ಅಜಿತ್‍ಕುಮಾರ್ ಪಂದಳಮ್ ಇವರು ಕೇರಳ ಸರಕಾರದ ಹಣಕಾಸು ಸಚಿವ ಶ್ರೀ ತೋಮಸ್ ಇಸಾಖ್ ಇವರಿಗೆ ಹಸ್ತಾಂತರಿಸಿದರು. ಶಾಸಕ ಶ್ರೀ ಸಾಜಿ ಚೆರಿಯನ್ ಉಪಸ್ಥಿತರಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top