+91 8255-266211
info@shreeodiyoor.org

ಒಡಿಯೂರು ಶ್ರೀ ವಿಕಾಸವಾಹಿನಿ ಸ್ವ-ಸಹಾಯ ಸಂಘಗಳ ಡಿಜಿಟಲೀಕರಣ.

ಶ್ರೀ ಗುರುದೇವ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ (ರಿ.), ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯಾಗಿ ಒಡಿಯೂರು ಶ್ರೀ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ (ರಿ.)ನ ಮೂಲಕ ದ.ಕ., ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತದೆ. ಇದಕ್ಕೆ ಪೂರಕವಾಗಿ ಒಡಿಯೂರು ಶ್ರೀ ವಿಕಾಸವಾಹಿನಿ ಸ್ವ-ಸಹಾಯ ಸಂಘಗಳ ಡಿಜಿಟಲೀಕರಣಕ್ಕೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮೇಷ ಸಂಕ್ರಮಣದ ಮಾಸಿಕ ಸಭೆಯಲ್ಲಿ ಚಾಲನೆ ನೀಡಿದರು. ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಲ| ಎಂ.ಜೆ.ಎಫ್.| ಎ. ಸುರೇಶ್ ರೈ ಉಪಸ್ಥಿತರಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top