+91 8255-266211
info@shreeodiyoor.org

ನೆರೆ ಪರಿಹಾರ ನಿಧಿಗೆ ರೂ.10ಲಕ್ಷ ದೇಣಿಗೆ


 

ಕರ್ನಾಟಕದಾದ್ಯಂತ ಭೀಕರ ಅತಿವೃಷ್ಟಿಯಿಂದಾಗಿ ಸಂಭವಿಸಿದ ಹಾನಿಯಿಂದೊಳಗಾದ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಿಂದ ಹಾಗೂ ಒಡಿಯೂರು ಶ್ರೀ ವಿವಿಧೊದ್ದೇಶ ಸೌಹಾರ್ದ ಸಹಕಾರಿಯಿಂದ ರೂ.10 ಲಕ್ಷದ ಚೆಕ್ಕನ್ನು ಪೂಜ್ಯ ಒಡಿಯೂರು ಶ್ರೀಗಳವರು ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಒಡಿಯೂರು ಶ್ರೀ ವಿ.ಸ.ಸೌ. ಸಹಕಾರಿಯ ಅಧ್ಯಕ್ಷ ಲ| ಎ. ಸುರೇಶ್ ರೈ, ನಿರ್ದೇಶಕರುಗಳಾದ ಶ್ರೀ ಪಿ.ಲಿಂಗಪ್ಪ ಗೌಡ, ಶ್ರೀ ವೇಣುಗೋಪಾಲ ಮಾರ್ಲ, ಶ್ರೀ ದೇವಪ್ಪ ನೋಂಡ, ಶ್ರೀ ತಾರಾನಾಥ ಶೆಟ್ಟಿ ಒಡಿಯೂರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ ಉಗ್ಗಪ್ಪ ಶೆಟ್ಟಿ ಕೊಂಬಿಲ, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಶ್ರೀ ಪದ್ಮನಾಭ ಒಡಿಯೂರು, ಹಿರಿಯ ಪತ್ರಕರ್ತ ಶ್ರೀ ಯಶವಂತ ವಿಟ್ಲ, ಬಿ.ಜೆ.ಪಿ. ದ.ಕ. ಜಿಲ್ಲಾ ಕಾರ್ಯದರ್ಶಿ ಶ್ರೀ ರಾಮದಾಸ್ ಶೆಟ್ಟಿ, ಬಂಟ್ವಾಳ ಕ್ಷೇತ್ರ ಕಾರ್ಯದರ್ಶಿ ಶ್ರೀ ರಮಾನಾಥ ರೈ, ಬಿ.ಜೆ.ಪಿ. ಕನ್ಯಾನ ಮತ್ತು ಕರೋಪಾಡಿ ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮುಂಬೈಯ ಗುರುಭಕ್ತರು, ಒಡಿಯೂರು ಸಹಕಾರಿಯ ಹಾಗೂ ಶ್ರೀ ಸಂಸ್ಥಾನದ ಸಿಬ್ಬಂದಿ ವರ್ಗದವರು ಪರಿಹಾರ ನಿಧಿಗೆ ಸಹಕರಿಸಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top