ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಮಹಾರಾಷ್ಟ್ರದ ಗುರುಭಕ್ತರ ವಿನಂತಿಯ ಮೇರೆಗೆ ಜುಲೈ 27ರಿಂದ ಆಗಸ್ಟ್ 6ರ ತನಕ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಮುಂಬೈ ಮಹಾರಾಷ್ಟ್ರ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳು ಮುಂಬೈ-ಥಾನೆ-ನವಿಮುಂಬೈ ಮಹಾನಗರಗಳಲ್ಲಿ ಸಂಘಟಿಸುವ ಹಲವು ಕಾರ್ಯಕ್ರಮಗಳಲ್ಲಿ ದಿವ್ಯ ಉಪಸ್ಥಿತಿಯನ್ನು ಕರುಣಿಸಿ ಆಶೀರ್ವಚನ ನೀಡಿಲಿದ್ದಾರೆ.
ಸದ್ರಿ ದಿನಗಳಲ್ಲಿ ಒಡಿಯೂರು ಶ್ರೀ ಸಂಸ್ಥಾನದಲ್ಲಿ ಪೂಜ್ಯ ಶ್ರೀಗಳವರು ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.