+91 8255-266211
info@shreeodiyoor.org

ಒಡಿಯೂರಿನಲ್ಲಿ ಶ್ರೀ ಶಾರದಾ ಮಹೋತ್ಸವ


 
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.05-10-2019ನೇ ಶನಿವಾರ ಮೊದಲ್ಗೊಂಡು ತಾ.08-10-2019ರ ತನಕ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಶಾರದಾ ಮಹೋತ್ಸವ ನಡೆಯಲಿರುವುದು. ಈ ಸುಸಂದರ್ಭ
ಶರದೃತು ಸಂಸ್ಕಾರ ಶಿಬಿರ:

ತಾ.05-10-2019ರಿಂದ 07-10-2019ರ ತನಕ 6ನೇ ತರಗತಿಯಿಂದ 10ನೇ ತರಗತಿಯ ವರೆಗಿನ ಶಾಲಾ ಮಕ್ಕಳಿಗೆ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠವು ‘ಶರದೃತು ಸಂಸ್ಕಾರ ಶಬಿರ’ವನ್ನು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಆಯೋಜಿಸಿದೆ. ಈ ಶಿಬಿರದಲ್ಲಿ ಯೋಗ, ಧ್ಯಾನ, ರಂಗ ತರಬೇತಿ, ಪೇಪರ್ ಕ್ರಾಫ್ಟ್ ಮುಂತಾದ ತರಬೇತಿಗಳನ್ನು ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಈ ಶಿಬಿರದ ಸದುಪಯೋಗವನ್ನು ಪಡೆದಕೊಳ್ಳಬಹುದು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top