+91 8255-266211
info@shreeodiyoor.org

ಅಖಂಡ ಭಗವನ್ನಾಮಸಂಕೀರ್ತನೆ ಆರಂಭ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಎಪ್ರಿಲ್ 19ರಂದು ಜರಗುವ ಶ್ರೀ ಮದ್ರಾಮಾಯಣ ಮಹಾಯಜ್ಞ-ಹನುಮೋತ್ಸವದ ಪ್ರಯುಕ್ತ ಎ.14 ಆದಿತ್ಯವಾರ ಶ್ರೀ ರಾಮನವಮಿಯಿಂದ ಮೊದಲ್ಗೊಂಡು ಎ.19 ಶುಕ್ರವಾರ ಪ್ರಾತಃಕಾಲದ ತನಕ ನಡೆಯುವ ಅಖಂಡ ಭಗವನ್ನಾಮ ಸಂಕೀರ್ತನೆ ಎ.14ರಂದು ಪ್ರಾತಃಕಾಲ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ದೀಪ ಪ್ರಜ್ವಲನದೊಂದಿಗೆ ನಾಮಸಂಕೀರ್ತನೆಗೆ ಚಾಲನೆ ನೀಡಿದರು. ಈ ಸುಸಂದರ್ಭ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಹಾಗೂ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top