+91 8255-266211
info@shreeodiyoor.org

ಸಾರ್ವಜನಿಕ ಆಶ್ಲೇಷಬಲಿ ಪೂಜೆ

ಜುಲೈ 27 ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಾಗರ ಪಂಚಮಿ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಸ್ವಯಂಭೂ ನಾಗಸನ್ನಿಧಿಯಲ್ಲಿ ನಾಗತಂಬಿಲ, ಪಂಚಾಮೃತ ಅಭಿಷೇಕ, ಮಹಾಪೂಜೆ ನಡೆಯಲಿದೆ.ಪೂಜ್ಯ ಶ್ರೀಗಳವರು ನಾಗರ ಪಂಚಮಿಯ ಸಂದೇಶ ನೀಡಲಿದ್ದಾರೆ. ಮಧ್ಯಾಹ್ನ ಸಾರ್ವಜನಿಕ ಆಶ್ಲೇಷಬಲಿಪೂಜೆಯ ಮಹಾಮಂಗಳಾರತಿ. ಆರಾಧ್ಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಆನಂತರ ಮಹಾಸಂತರ್ಪಣೆ.

ಅಪರಾಹ್ಣ ಘಂಟೆ 3.00ರಿಂದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ನಿಡ್ಲೆ ಇವರಿಂದ ಮೂಲಕಾಸುರ ಕಾಳಗ ಯಕ್ಷಗಾನ ಬಯಲಾಟ, ರಾತ್ರಿ ರಂಗಪೂಜೆ, ಮಹಾಪೂಜೆ ನಡೆಯಲಿದೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top