+91 8255-266211
info@shreeodiyoor.org

ಪಾಲ್ಗರ್ ಸಂತರ ಹತ್ಯೆಗೆ ಒಡಿಯೂರು ಶ್ರೀಗಳ ಖಂಡನೆ:

ಮಹಾರಾಷ್ಟ್ರದ ಪಾಲ್ಗರ್ ಎಂಬಲ್ಲಿ ಅಮಾನುಷವಾಗಿ ಈರ್ವರು ಸಂತರ ಹತ್ಯೆ ನಡೆದಿರುವುದು ಖಂಡನೀಯ. ಭಾರತ ದೇಶದ ಮೌಲ್ಯವೆಂದರೆ ಸಾಧು-ಸಂತರು. ಸದುದ್ದೇಶಕ್ಕಾಗಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿರುವುದು ದುಃಖಕರ. ಸಂತರ ಹತ್ಯೆ ಎಂದರೆ ಸಂಸ್ಕೃತಿಯ ಹತ್ಯೆಯಂತೆ. ಬದುಕಿ-ಬದುಕಬಿಡುವ ಸಂತರ ಬದುಕನ್ನೇ ಕಸಿದುಕೊಳ್ಳುವುದು ಉಚಿತವಲ್ಲ. ಕಾನೂನನ್ನು ಕೈಗೆತ್ತಿಕೊಳ್ಳುವುದು ಅಪರಾಧ. ಇಂತಹ ಕೃತ್ಯಗೈದ ದುಷ್ಟರಿಗೆ ಕೂಡಲೇ ಕಠಿಣ ಶಿಕ್ಷೆಯಾಗಬೇಕು. ಸಾಧು-ಸಂತರು ಎಚ್ಚೆತ್ತುಕೊಂಡು ಇದರ ಬಗ್ಗೆ ಕೂಡಲೇ ಗಮನಹರಿಸಬೇಕು. ಸರಕಾರವು ಕೂಲಂಕುಷವಾಗಿ ತನಿಖೆ ನಡೆಸಿ ನ್ಯಾಯ ದೊರಕಿಸಬೇಕಾಗಿ ವಿನಂತಿಸುತ್ತೇವೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top