Category Educational

2019-20ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ

2019-20ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶ್ರೀಗುರುದೇವ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿರುತ್ತದೆ ಮತ್ತು ಶ್ರೀ ಗುರುದೇವ ಕನ್ನಡ ಮಾಧ್ಯಮ ಶಾಲೆಯು ಶೇಕಡಾ 80 ರ ಫಲಿತಾಂಶವನ್ನು ಪಡೆದಿರುತ್ತದೆ. 4 ವಿದ್ಯಾರ್ಥಿಗಳು A+ ಗ್ರೇಡ್ ಹಾಗೂ 7ವಿದ್ಯಾರ್ಥಿಗಳು A ಗ್ರೇಡ್‍ಗಳನ್ನು ಪಡೆದಿರುತ್ತಾರೆ. ಆಂಗ್ಲಮಾದ್ಯಮದಲ್ಲಿ ಜಿತೇಶ್ ಪಿ ಶೆಟ್ಟಿ…

“ಬೇಕುಗಳನ್ನು ಕಡಿಮೆ ಮಾಡದೆ ಶಾಂತಿ ಲಭಿಸದು.” – ಒಡಿಯೂರು ಶ್ರೀ

  ಭಾರತೀಯತೆ ಅಂದರೆ ಸಂಸ್ಕೃತಿ. ಮಾತೃಹೃದಯ ಎಲ್ಲವನ್ನೂ ಅಪ್ಪಿಕೊಳ್ಳುತ್ತದೆ ಮತ್ತು ಒಪ್ಪಿಕೊಳ್ಳುತ್ತದೆ. ಮಕ್ಕಳ ಬಗ್ಗೆ ನಾವು ಕನಸನ್ನು ಕಾಣುವ. ಮಕ್ಕಳ ಜೊತೆ ಸಮಯ ಕಳೆಯಬೇಕು. ತಾಯಂದಿರು ಭಾಷೆಯ ಹಿಂದಿನ ಸಂಸ್ಕೃತಿಗೆ ಗಮನ ನೀಡಬೇಕು. ಬೇಕುಗಳನ್ನು ಕಡಿಮೆ ಮಾಡದೆ ಶಾಂತಿ ಲಭಿಸದು. ಜೀವನ ಮೌಲ್ಯ ತುಂಬುವ ಕೆಲಸ ತಾಯಿಯಿಂದ ಮನೆಯಲ್ಲೇ ಆಗಬೇಕು. ಆಗ ಮಾತ್ರ ಮಕ್ಕಳು ನಮ್ಮ…

‘ವಾಸ್ತವದ ಅನ್ವೇಷಣೆ ಸಾಧನೆಯ ಕೈಗನ್ನಡಿ’ – ಒಡಿಯೂರು ಶ್ರೀ

‘ಬೀಳ್ಕೊಡುಗೆ ಎನ್ನುವುದು ಭವಿಷ್ಯತ್ತಿನ ಕಡೆಗೆ ಹೋಗಲಿರುವ ಕೊಡುಗೆ. ವಿದ್ಯಾರ್ಥಿ ಬದುಕು ಭೋಗದ ಬದುಕಲ್ಲ, ಇದು ತ್ಯಾಗದ ಬದುಕು. ಕಲ್ಪನಾಲೋಕದ ಬದುಕಿಗಿಂತ ವಾಸ್ತವದ ಅನ್ವೇಷಣೆ ಸಾಧನೆಯ ಕೈಗನ್ನಡಿ. ಉತ್ತಮ ಮಿತ್ರರನ್ನು ಸಂಪಾದಿಸಿ ಗುಣಾತ್ಮಕ ಚಿಂತನೆಯನ್ನು ತಮ್ಮದಾಗಿಸಬೇಕು. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ವಿಷಯದಲ್ಲಿ ಪೋಷಕರು ವಿದ್ಯಾಭ್ಯಾಸ ಮುಂದುವರಿಯಲು ಬಿಡಬೇಕು. ಮಾತೃ ಋಣ, ಶಿಕ್ಷಕರ ಋಣ, ದೇಶದ ಋಣ ಸದಾ…

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ದ್ವಿತೀಯ ಬಹುಮಾನ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ಕೋಲಾರದಲ್ಲಿ ಜರಗಿದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿರುತ್ತಾಳೆ. ಇವಳಿಗೆ ಶಾಲಾ ಸಂಸ್ಕøತ ಅಧ್ಯಾಪಕಿ ಶ್ರೀಮತಿ ನಿವೇದಿತಾ ರವರು ಮಾರ್ಗದರ್ಶನವನ್ನು ನೀಡಿರುತ್ತಾರೆ.

ಜಿಲ್ಲಾ ಮಟ್ಟದ ಶ್ಲೋಕ ಕಂಠಪಾಠ: ಕು.ದೀಪಶ್ರೀ ಪದ್ಯಾಣ ತೃತೀಯ ಬಹುಮಾನ

ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನೈತಿಕ ಶಿಕ್ಷಣ ಯೋಜನೆಯನ್ವಯ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಜಿಲ್ಲಾ ಮಟ್ಟದ ಶ್ಲೋಕ ಕಂಠಪಾಠ ವಿಭಾಗದಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ 9ನೇ ತರಗತಿ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾಳೆ

‘ಶಾಲೆಗಳ ಮೂಲಕ ರಾಷ್ಟ್ರ ಕಟ್ಟುವ ಕಾಯಕ ನಡೆಯಬೇಕು’ – ಒಡಿಯೂರು ಶ್ರೀ

  ‘ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ’ದ ವಾರ್ಷಿಕೋತ್ಸವವು ವಿಜೃಂಭಣೆಯಿಂದ ದಿನಾಂಕ 25.11.2019ನೇ ಸೋಮವಾರದಂದು ನಡೆಯಿತು. ಪೂಜ್ಯ ಸಾಧ್ವಿ ಶ್ರೀ ಮಾತಾನಂದಮಯಿಯವರು ದೀಪೋಜ್ವಲನೆಗೈದು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು. ಬಳಿಕ ಕ್ರಮವಾಗಿ ಶ್ರೀ ಗುರುದೇವ ಗುರುಕುಲದಿಂದ ತೊಡಗಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಮನರಂಜನಾ ಕಾರ್ಯಕ್ರಮಗಳೊಂದಿಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. 11.00…

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ಪುಸ್ತಕ ಕೊಡುಗೆ

ಒಡಿಯೂರು ಶ್ರೀ ಯುವ ಸೇವಾಬಳಗ, ಮುಂಬೈ ಘಟಕದ ವತಿಯಿಂದ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಗ್ರಂಥಾಲಯಕ್ಕೆ ಹಲವು ನೀತಿಕಥೆಗಳ, ಮೌಲಿಕ ಪುಸ್ತಕಗಳು, ವಿಜ್ಞಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಯುವಸೇವಾ ಬಳಗದ ಅಧ್ಯಕ್ಷ ಡಾ. ಅದೀಪ್ ಶೆಟ್ಟಿಯವರು ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ಜಯಪ್ರಕಾಶ್ ಶೆಟ್ಟಿ, ಪ್ರಾಥಮಿಕ…

ಕು.ದೀಪಶ್ರೀಗೆ ಶ್ಲೋಕ ಕಂಠಪಾಠದಲ್ಲಿ ದ್ವಿತೀಯ : ಕು.ವಿದ್ಯಾಲಕ್ಷ್ಮಿ ಭಾಷಣ ಸ್ಪರ್ಧೆಯಲ್ಲಿ ತೃತೀಯ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ಶಾಂತಿವನ ಟ್ರಸ್ಟ್ ರಿ. ಧರ್ಮಸ್ಥಳ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬದುಕಿಗೆ ಬೆಳಕು ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಮತ್ತು ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಕು. ವಿದ್ಯಾಲಕ್ಷ್ಮಿ…

Deepashree is selected for state level in speech competition

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ದ.ಕ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ಪ್ರಥಮ ಬಹುಮಾನ ಪಡೆದು ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.