Category News Reports

20ನೇ ತುಳು ಐಸಿರೊ ‘ತುಳು ಸಾಹಿತ್ಯ ಸಮ್ಮೇಳನ’ ಉದ್ಘಾಟಿಸಿ ಒಡಿಯೂರು ಶ್ರೀ ಆಶೀರ್ವಚನ

“ಮನೆ, ಮನೆಗಳಲ್ಲಿ ತುಳು ಭಾಷೆ ಮಾತನಾಡುವ ಮೂಲಕ ತುಳು ಮಾತೆಯ ಉತ್ಸವ ನಡೆಯಬೇಕು. ವಿಶ್ವವಿದ್ಯಾನಿಲಯಗಳಲ್ಲಿ ತುಳು ಭಾಷೆಗೆ ಮಾನ್ಯತೆ ಸಿಕ್ಕಿರುವುದರಿಂದ ತುಳುವಿನ ಭವಿಷ್ಯ ಭದ್ರವಾಗಿದೆ. ತುಳುವರು ಕಾರ್ಯಕ್ಕೆ ಇಳಿದಾಗ ಮಾತ್ರ ನಮ್ಮ ತುಳು ಭಾಷೆಯು 8ನೇ ಪರಿಚ್ಛೇದಕ್ಕೆ ಸೇರಲು ಸಾಧ್ಯ. ಆನಂದದ ಮೂಲ ತ್ಯಾಗದಲ್ಲಿದೆ. ತ್ಯಾಗದಲ್ಲಿ ಮಾತ್ರ ಆನಂದದ ಅನುಭವವಿದೆ. ತುಳುವರಲ್ಲಿ ಹೃದಯ ಸಿರಿವಂತಿಕೆ ಇದೆ”…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶತರುದ್ರಾಭಿಷೇಕ

ಶ್ರೀ ಸಂಸ್ಥಾನದಲ್ಲಿ ತಾ. 21-02-2020ನೇ ಶುಕ್ರವಾರ ರಾತ್ರಿ ಮಹಾ ಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಆರಾಧ್ಯ ದೇವರಿಗೆ ಶತರುದ್ರಾಭಿಷೇಕ ನಡೆಯಲಿರುವುದು. ತಾವೆಲ್ಲರೂ ಪಾಲ್ಗೊಂಡು ಆರಾಧ್ಯ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷೆ. ಸೇವೆ ಮಾಡಲಿಚ್ಛಿಸುವವರು ಶ್ರೀ ಸಂಸ್ಥಾನದ ಸೇವಾವಿಭಾಗದಲ್ಲಿ ಹೆಸರು ನೋಂದಾಯಿಸಬಹುದು.

“ಜೀವನ ರಥದ ಪಥವೇ ಧರ್ಮ” ಶ್ರೀಒಡಿಯೂರು ರಥೋತ್ಸವದ ಧರ್ಮಸಭೆಯಲ್ಲಿ-ಒಡಿಯೂರು ಶ್ರೀ

“ಕೃಷಿ ಸಂಸ್ಕøತಿ-ಋಷಿ ಸಂಸ್ಕøತಿ ಸಮಾನವಾಗಿ ಸಾಗಬೇಕು. ಆತ್ಮತತ್ತ್ವ ಮಾತ್ರವೇ ಸತ್ಯ. ಜೀವನ ರಥದ ಪಥವೇ ಧರ್ಮ. ಆಗ ಉದ್ದೇಶಿತ ಗುರಿ ತಲಪಲು ಸಾಧ್ಯ. ಆತ್ಮೋನ್ನತಿಯ ಕಡೆಗೆ ಜೀವನರಥವನ್ನು ಎಳೆಯಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜರಗಿದ ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆಯ ಧರ್ಮಸಭೆಯನ್ನು ಉದ್ಘಾಟಿಸಿ ಆಶೀರ್ವಚನವಿತ್ತರು. ವೇದಿಕೆಯಲ್ಲಿ ಪರಮಪೂಜ್ಯ…

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ದ್ವಿತೀಯ ಬಹುಮಾನ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ 9ನೇ ತರಗತಿ ಕೋಲಾರದಲ್ಲಿ ಜರಗಿದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಸಂಸ್ಕೃತ ಭಾಷಣದಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿರುತ್ತಾಳೆ. ಇವಳಿಗೆ ಶಾಲಾ ಸಂಸ್ಕøತ ಅಧ್ಯಾಪಕಿ ಶ್ರೀಮತಿ ನಿವೇದಿತಾ ರವರು ಮಾರ್ಗದರ್ಶನವನ್ನು ನೀಡಿರುತ್ತಾರೆ.

ಜಿಲ್ಲಾ ಮಟ್ಟದ ಶ್ಲೋಕ ಕಂಠಪಾಠ: ಕು.ದೀಪಶ್ರೀ ಪದ್ಯಾಣ ತೃತೀಯ ಬಹುಮಾನ

ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನೈತಿಕ ಶಿಕ್ಷಣ ಯೋಜನೆಯನ್ವಯ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಜಿಲ್ಲಾ ಮಟ್ಟದ ಶ್ಲೋಕ ಕಂಠಪಾಠ ವಿಭಾಗದಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ 9ನೇ ತರಗತಿ ವಿದ್ಯಾರ್ಥಿನಿ ಕು.ದೀಪಶ್ರೀ ಪದ್ಯಾಣ ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾಳೆ

ಒಡಿಯೂರು ಶ್ರೀಗಳ ಸಂತಾಪ

ವಿಶ್ವವಂದ್ಯ, ವಿಶ್ವಸಂತ, ಉಡುಪಿ ಅಷ್ಟಮಠದ ಹಿರಿಯ ಯತಿಶ್ರೇಷ್ಠರಾದ ಪೂಜ್ಯ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಕೃಷ್ಣೈಕ್ಯರಾದುದು ಭಾರತೀಯ ಸನಾತನ ಪರಂಪರೆಗೆ ತುಂಬಲಾರದ ನಷ್ಟ. ಲೋಕೋದ್ಧಾರದ ಚುಕ್ಕಾಣಿ ಹಿಡಿದು, ಸಮನ್ವಯತೆಯ ಹರಿಕಾರರಾಗಿ ಆಧ್ಯಾತ್ಮಿಕ ಪರಿವ್ರಾಜಕರಾಗಿದ್ದ ಪೂಜ್ಯ ಶ್ರೀಗಳವರು ಅಗಲಿರುವುದು ತುಂಬಾ ದುಃಖವನ್ನುಂಟು ಮಾಡಿದೆ ಎಂದು ಒಡಿಯೂರು ಶ್ರೀಗಳವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಒಡಿಯೂರಿನಲ್ಲಿ ನಡೆದ ಉಚಿತ ನೇತ್ರ ತಪಸಣಾ ಮತ್ತು ಚಿಕಿತ್ಸಾ ಶಿಬಿರ

ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ, ಇವರ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ಒಡಿಯೂರಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ, ಇವರ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

“ಭಗವಂತನ ಕಲ್ಯಾಣಗುಣಗಳನ್ನು ಮೈಗೂಡಿಸಿಕೊಂಡಾಗ ಆಚರಣೆಗಳು ಅರ್ಥಪೂರ್ಣ”: ಒಡಿಯೂರು ಶ್ರೀ ಆಶೀರ್ವಚನ

“ಭಗವಂತನ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಅಲೌಕಿಕ ಬದುಕು ಉನ್ನತಿಯನ್ನು ಸಾಧಿಸುತ್ತದೆ. ಲೌಕಿಕ ಬಂಧನದಿಂದ ಬಿಡುಗಡೆಗೊಂಡರೆ ಅದುವೇ ಮೋಕ್ಷ. ಬದುಕು ಸತ್ವಪೂರ್ಣವಾಗಿರಬೇಕು. ಧರ್ಮಯುಕ್ತವಾಗಿರಬೇಕು. ಪ್ರಪಂಚವೇ ನಮಗೆ ಪಾಠಶಾಲೆ. ಶ್ರೀ ಗುರುಚರಿತ್ರೆ ಅಮೃತವನ್ನು ಸವಿಯುವಂತೆ ಮಾಡುತ್ತದೆ. ಗುರುದತ್ತಾತ್ರೇಯರ ತತ್ತ್ವಗಳನ್ನು ನಮ್ಮೊಳಗೆ ಅನುಷ್ಠಾನಿಸಬೇಕು. ಆಗ ಭಗವಂತನ ಪ್ರೀತಿಗೆ ಪಾತ್ರರಾಗಲು ಸಾಧ್ಯ. ಹೃದಯದಲ್ಲಿ ದೃಢತೆ ಇದ್ದಾಗ ಕಾರ್ಯ ಸಾಧನೆಯಾಗುತ್ತದೆ. ಭಗವಂತನ ಕಲ್ಯಾಣಗುಣಗಳನ್ನು ಮೈಗೂಡಿಸಿಕೊಂಡಾಗ…