Category News Reports

“ನಾಗಾರಾಧನೆ ಪ್ರಕೃತಿಯ ಆರಾಧನೆ” ನಾಗರ ಪಂಚಮಿ ಮಹೋತ್ಸವದಲ್ಲಿ ಒಡಿಯೂರು ಶ್ರೀ ದಿವ್ಯ ಸಂದೇಶ

“ನಾಗಾರಾಧನೆಯಲ್ಲಿ ಪ್ರಕೃತಿಯ ಆರಾಧನೆಯ ತತ್ತ್ವವಿದೆ. ಸಂಪತ್ತುಗಳ ಅಧಿಪತಿ ನಾಗರಾಜ. ನಾಗಾರಾಧನೆಯ ಹಿಂದೆ ಮೂಲ ಸಂಸ್ಕøತಿಯ ಅಂಶವಿದೆ. ಆಸ್ತಿಕ ಭಾವಕ್ಕೆ ಹೆಚ್ಚು ಗೌರವವಿದೆ. ಪುರಾಣಗಳ ಪ್ರಕಾರ 16000 ಸರ್ಪಸಂಕುಲಗಳಿವೆ. ನಾಗಾರಾಧನೆಯ ಹೆಸರಿನಲ್ಲಿ ಪ್ರಕೃತಿಯ ಉಳಿವಿದೆ. ಪ್ರಕೃತಿಯ ಆರಾಧನೆಯಿಂದ ಆರೋಗ್ಯದ ಹಿತವಿದೆ. ಪ್ರಕೃತಿಯಲ್ಲಿ ಪರಮಾತ್ಮನ ಅಸ್ತಿತ್ವವನ್ನು ಕಾಣಬಹುದು. ಸಹೋದರತ್ವವನ್ನು ಪ್ರತಿನಿಧಿಸುವ ನಾಗರಪಂಚಮಿ ಹಬ್ಬ ನಾಡಿಗೆ ವಿಶೇಷ ಹಬ್ಬವಾಗಿದೆ” ಎಂದು…

‘ಭಗವಂತ ನೀಡಿದ ಆಯುಷ್ಯವನ್ನು ಸನ್ನಡತೆ-ಸತ್ಕರ್ಮದಲ್ಲಿ ಕಳೆಯೋಣ’- ಪೂಜ್ಯ ಶ್ರೀಗಳವರ ಜನ್ಮದಿನೋತ್ಸವದ ಪ್ರಯುಕ್ತ ಗುರುವಂದನಾ ಸಮಾರಂಭದಲ್ಲಿ – ಒಡಿಯೂರು ಶ್ರೀ ಆಶೀರ್ವಚನ

“ತ್ಯಾಗದ ಬದುಕಿನಲ್ಲಿ ನಿಜವಾದ ಸುಖವಿದೆ. ಬದುಕು ಬದುಕಾಗಲು ಅಧ್ಯಾತ್ಮ ಅಗತ್ಯ. ಧರ್ಮದ ಚೌಕಟ್ಟಿನಲ್ಲಿ ಶ್ರೇಯಸ್ಸಿನ ಮಾರ್ಗದಲ್ಲಿ ನಡೆದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಭಗವಂತ ನೀಡಿದ ಆಯುಷ್ಯವನ್ನು ಸನ್ನಡತೆ, ಸತ್ಕರ್ಮದಲ್ಲಿ ಕಳೆಯಬೇಕು. ಆತ್ಮೋನ್ನತಿಯ ಜೊತೆಗೆ ಸಮಾಜೋನ್ನತಿಯೂ ಆಗಬೇಕು. ಆತ್ಮನಿಷ್ಠ ಸಂಸ್ಕøತಿಯಿಂದ ಯಾವುದೇ ಅಪಾಯ ಆಗದು. ಇಂದು ಆಟಿ ಅಮಾವಾಸ್ಯೆಯ ದಿನ. ಸಪ್ತವರ್ಣ(ಹಾಲೆ) ಮರದ ರಸದಲ್ಲಿ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ‘ಶ್ರೀಗಂಧ ಬೆಳೆಯೋಣ’ ಯೋಜನೆಗೆ ಚಾಲನೆ

ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮದ ಪ್ರಯುಕ್ತ ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಸಮಿತಿಯ ವತಿಯಿಂದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.08-07-2021ನೇ ಗುರುವಾರ ಪೂರ್ವಾಹ್ಣ ಘಂಟೆ 10.00ಕ್ಕೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಹಾಗೂ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ‘ಮನೆಗೊಂದು ಶ್ರೀ ಗಂಧದ ಗಿಡ-ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವವು ನಡೆಯಲಿರುವುದು.…

ಪ್ರಕಟಣೆ

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಈಗಾಗಲೇ ಎಪ್ರಿಲ್ 23 ಮತ್ತು 24ರಂದು ನಿಗದಿಯಾಗಿದ್ದ ‘ರಾಜಾಂಗಣ ಲೋಕಾರ್ಪಣೆ’ ಮತ್ತು ‘ಸಹಕಾರ ಸಂಭ್ರಮ’ ಕಾರ್ಯಕ್ರಮವನ್ನು ರಾಜ್ಯ ಸರಕಾರ ಕೋವಿಡ್ ನಿಯಂತ್ರಣ ಅಧಿಸೂಚನೆಯ ಅನ್ವಯ ಮುಂದೂಡಲಾಗಿದೆ. ಶ್ರೀ ಸಂಸ್ಥಾನದ ಭಕ್ತಾದಿಗಳು ಹಾಗೂ ಸಹಕಾರಿ ಬಂಧುಗಳು ಸಹಕರಿಸಬೇಕಾಗಿ ವಿನಂತಿ. ಕಾರ್ಯನಿರ್ವಾಹಕರು, ಒಡಿಯೂರು ಶ್ರೀ ಸಂಸ್ಥಾನಮ್, ಅಧ್ಯಕ್ಷರು, ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸಮಿತಿ

ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಮಂಜೇಶ್ವರ ವಲಯ ಸಮಿತಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

‘ಜನಸೇವೆಯೇ ಭಗವಂತನಿಗೆ ಪ್ರೀತ್ಯರ್ಥ’ ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಮಂಜೇಶ್ವರ ವಲಯ ಸಮಿತಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಪೂಜ್ಯ ಒಡಿಯೂರು ಶ್ರೀ ಮಂಜೇಶ್ವರ, ಫೆ. 7: “ಮನುಷ್ಯನ ಬದುಕು ನಿಂತ ನೀರಾಗದೆ ಸದಾ ಹರಿಯುತ್ತಿರುವ ನದಿಯಂತಿರಬೇಕು. ಜ್ಞಾನದ ಕೀಲಿಕೈ ಅನುಭವವಾಗಿದೆ. ಸಮಸ್ಯೆಗಳ ಅನುಭವಗಳಿಂದ ಜ್ಞಾನದ ವೃದ್ಧಿ ಸಾಧಿಸಬೇಕು. ಮನುಷ್ಯ ತನ್ನ ಹುಟ್ಟು ಮತ್ತು ಸಾವಿನ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶತರುದ್ರಾಭಿಷೇಕ

ಶ್ರೀ ಸಂಸ್ಥಾನದಲ್ಲಿ ತಾ.11-03-2021ನೇ ಶುಕ್ರವಾರ ರಾತ್ರಿ ಮಹಾಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಆರಾಧ್ಯ ದೇವರಿಗೆ ಶತರುದ್ರಾಭಿಷೇಕ ನಡೆಯಲಿರುವುದು.

ಮನೆ-ಮನೆಗಳಲ್ಲಿ ತುಳು ಭಾಷೆ ಬೆಳೆಯಲಿ – 21ನೇ ತುಳು ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಒಡಿಯೂರು ಶ್ರೀ ಆಶೀರ್ವಚನ

“ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ರಾಜ್ಯ, ಕೇಂದ್ರ ಸರಕಾರಗಳಿಗೆ ಮನವಿ ಮಾಡಲಾಗಿದೆ. ತುಳುವರಲ್ಲಿ ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾಶಕ್ತಿಯ ಕೊರತೆಯಿದೆ. ಅದನ್ನು ನಿವಾರಿಸಿ ಸಮ್ಮಿಳಿತ ಪ್ರಯತ್ನವಾಗಬೇಕು. ಮನೆ-ಮನೆಗಳಲ್ಲಿ ತುಳು ಭಾಷೆಯಲ್ಲೇ ಮಾತುಕತೆಯಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಜರಗಿದ 21ನೇ ತುಳು ಸಾಹಿತ್ಯ…

ಬೆಳಕಿನೆಡೆಗೆ…

ದೀಪದ ಆರಾಧನೆ ದೀಪೋತ್ಸವ. ಬದುಕೇ ದೀಪೋತ್ಸವ ಆಗಬೇಕು. ಅಂತರ್‍ಜ್ಯೋತಿ ಬೆಳಗಿದರೆ ನಮ್ಮಲ್ಲಿ ಹುದುಗಿರುವ ಅಸುರ ಶಕ್ತಿಯೆಂಬ ಅಂಧÀಕಾರ ನೀಗಿ ಜ್ಞಾನದ ಬೆಳಕು ಮೂಡಿ ಬರಲು ಸಾಧ್ಯ. ಬೆಳಕಿಲ್ಲದೆ ಕತ್ತಲಿಲ್ಲ, ಕತ್ತಲಿಲ್ಲದೆ ಬೆಳಕಿಲ್ಲ. ಬೆಳಕಿನ ದೀಪ ಬೆಳಗಿಸಲು ಕತ್ತಲು ಬೇಕು. ಅಂಧಕಾರವನ್ನು ಓಡಿಸಲು ಬೆಳಕು ಬೇಕು. ಆ ಬೆಳಕು ಎಂಬ ಶಕ್ತಿ ಪ್ರತಿಯೋರ್ವನ ದೇಹದ ಒಳಗೂ ಇದೆ…

ಸಮಾಜದ ಸ್ವಾಸ್ಥ್ಯಕ್ಕೆ ಆರಾಧನೆಗಳು ಪೂರಕ – ಒಡಿಯೂರು ಶ್ರೀ

“ಸಮುದ್ರ ಮಥನ ಸಮಯದಲ್ಲಿ ಅವತರಿಸಿದ ಶ್ರೀ ಧನ್ವಂತರೀ ದೇವರ ಆರಾಧನೆಯಿಂದ ಸರ್ವರೋಗ ನಿವಾರಣೆಯಾಗುತ್ತದೆ. ಆರೋಗ್ಯಪೂರ್ಣ ಬದುಕಿಗೆ ಭಗವದಾರಾಧನೆಯ ಅಗತ್ಯವಿದೆ. ನೈತಿಕ ಸ್ವಾಸ್ಥ್ಯ, ಸಮಾಜದ ಸ್ವಾಸ್ಥ್ಯಕ್ಕೆ ಆರಾಧನೆಗಳು ಪೂರಕ. ಶ್ರೀ ಧನ್ವಂತರೀ ದೇವರ ಆರಾಧನೆಯ ಮೂಲಕ ಕೊರೋನಾ ಮಹಾಮಾರಿಯಿಂದ ಜಗತ್ತೇ ಮುಕ್ತಿಹೊಂದಲಿ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂದೇಶ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಧನ್ವಂತರೀ ಹವನ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನ.12ರಂದು ಗುರುವಾರ ಬೆಳಿಗ್ಗೆ ಪರಮಪೂಜ್ಯ ಶ್ರೀಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಧನ್ವಂತರೀ ಜಯಂತಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಶ್ರೀ ಧನ್ವಂತರೀ ಹವನವು ನಡೆಯಲಿರುವುದು.