Category societal

‘ಭಗವಂತ ನೀಡಿದ ಆಯುಷ್ಯವನ್ನು ಸನ್ನಡತೆ-ಸತ್ಕರ್ಮದಲ್ಲಿ ಕಳೆಯೋಣ’- ಪೂಜ್ಯ ಶ್ರೀಗಳವರ ಜನ್ಮದಿನೋತ್ಸವದ ಪ್ರಯುಕ್ತ ಗುರುವಂದನಾ ಸಮಾರಂಭದಲ್ಲಿ – ಒಡಿಯೂರು ಶ್ರೀ ಆಶೀರ್ವಚನ

“ತ್ಯಾಗದ ಬದುಕಿನಲ್ಲಿ ನಿಜವಾದ ಸುಖವಿದೆ. ಬದುಕು ಬದುಕಾಗಲು ಅಧ್ಯಾತ್ಮ ಅಗತ್ಯ. ಧರ್ಮದ ಚೌಕಟ್ಟಿನಲ್ಲಿ ಶ್ರೇಯಸ್ಸಿನ ಮಾರ್ಗದಲ್ಲಿ ನಡೆದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಭಗವಂತ ನೀಡಿದ ಆಯುಷ್ಯವನ್ನು ಸನ್ನಡತೆ, ಸತ್ಕರ್ಮದಲ್ಲಿ ಕಳೆಯಬೇಕು. ಆತ್ಮೋನ್ನತಿಯ ಜೊತೆಗೆ ಸಮಾಜೋನ್ನತಿಯೂ ಆಗಬೇಕು. ಆತ್ಮನಿಷ್ಠ ಸಂಸ್ಕøತಿಯಿಂದ ಯಾವುದೇ ಅಪಾಯ ಆಗದು. ಇಂದು ಆಟಿ ಅಮಾವಾಸ್ಯೆಯ ದಿನ. ಸಪ್ತವರ್ಣ(ಹಾಲೆ) ಮರದ ರಸದಲ್ಲಿ…

ಕೋವಿಡ್ ನಿಯಮ ಅನುಸರಿಸಿ ಜನ್ಮದಿನೋತ್ಸವ (ಗ್ರಾಮೋತ್ಸವ) ಆಚರಣೆ- ಒಡಿಯೂರು ಶ್ರೀ

“ಗುರುಭಕ್ತರು ತಮ್ಮ ತಮ್ಮ ಮನೆಯಲ್ಲೇ ಇದ್ದು ಹನುಮಾನ್ ಚಾಲೀಸಾ ಪಠಣದ ಮೂಲಕ ಜನ್ಮದಿನವನ್ನು ಆಚರಿಸಬಹುದು. ಎಲ್ಲರ ಒಳಿತಿಗಾಗಿ ಸನ್ನಿಧಿಯಲ್ಲಿ ನಾವು ಪ್ರಾರ್ಥಿಸುತ್ತೇವೆ. ಶ್ರೀ ಸಂಸ್ಥಾನದಲ್ಲಿ ಸರಳ ರೀತಿಯಲ್ಲಿ ಶ್ರೀ ಗುರುಪಾದುಕಾರಾಧನೆ ನಡೆಯುತ್ತದೆ. ಯಾವುದೇ ಲೋಪ ಬಾರದಂತೆ ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸೋಣ. ಕಾಯಿಲೆಯ ಬಗ್ಗೆ ಜಾಗೃತಿ ಇರಲಿ. ಆತ್ಮವಿಶ್ವಾಸವನ್ನು ವೃದ್ಧಿಸಿಕೊಂಡು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ…

‘ಶ್ರೀಗಂಧ ಬೆಳೆಯೋಣ’ ಯೋಜನೆಗೆ ಚಾಲನೆ ನೀಡಿ ಒಡಿಯೂರು ಶ್ರೀ ಆಶೀರ್ವಚನ

“ಪ್ರಕೃತಿ ಉಳಿದರೆ ನಮ್ಮ ಉಳಿವು” ಷಷ್ಠ್ಯಬ್ದ ಸಂಭ್ರಮದ ಪ್ರಯುಕ್ತ ‘ಮನೆಗೊಂದು ಶ್ರೀಗಂಧದ ಸಸಿ – ಶ್ರೀಗಂಧ ಬೆಳೆಯೋಣ’ ಯೋಜನೆಗೆ ಚಾಲನೆ ನೀಡಿ ಒಡಿಯೂರು ಶ್ರೀ ಆಶೀರ್ವಚನ “ಆರೋಗ್ಯಕ್ಕೆ ಹಾನಿಕಾರಕವಾದ ಅಕೇಶಿಯಾದಂತಹ ಗಿಡದ ಬದಲು ಗಿಡಮೂಲಿಕೆ, ಹಣ್ಣುಗಳ ಗಿಡಗಳನ್ನು ಬೆಳೆಸಬೇಕು. ಪ್ರಕೃತಿಯ ಉಳಿವು ನಮ್ಮಿಂದಲೇ ಅಗಬೇಕು. ಪ್ರತಿಯೊಬ್ಬರೂ ತಮ್ಮ ಹುಟ್ಟುಹಬ್ಬವನ್ನು ಆಚರಿಸುವಾಗ ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸಿದಾಗ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಆ.1ರಂದು ‘ಆಟಿದ ಆಯನೊ’

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆಗಸ್ಟ್ 1ರಂದು (ಆಟಿ ತಿಂಗೊಲು 16 ಪೋಪಿನಾನಿ) ಆದಿತ್ಯವಾರ ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ ಸಮಿತಿ ಮತ್ತು ಒಡಿಯೂರ್ದ ತುಳುಕೂಟದ ಜಂಟಿ ಆಶ್ರಯದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ‘ಆಟಿದ ಆಯನೊ’ ತುಳು ನಡಕೆದ ಲೇಸ್ ಜರಗಲಿರುವುದು. ಆಟಿದ ಉಲಮರ್ಗಿಲ್ ಎಂಬ ವಿಚಾರದ ಬಗ್ಗೆ ಶ್ರೀಮತಿ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ‘ಶ್ರೀಗಂಧ ಬೆಳೆಯೋಣ’ ಯೋಜನೆಗೆ ಚಾಲನೆ

ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮದ ಪ್ರಯುಕ್ತ ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಸಮಿತಿಯ ವತಿಯಿಂದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.08-07-2021ನೇ ಗುರುವಾರ ಪೂರ್ವಾಹ್ಣ ಘಂಟೆ 10.00ಕ್ಕೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಹಾಗೂ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ‘ಮನೆಗೊಂದು ಶ್ರೀ ಗಂಧದ ಗಿಡ-ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವವು ನಡೆಯಲಿರುವುದು.…

ಹುಟ್ಟುಹಬ್ಬಕ್ಕೊಂದು ಗಿಡ ನೆಡೋಣ… ಸಂರಕ್ಷಿಸೋಣ…

ಪರಿಸರ ಸ್ನೇಹಿಗಳಾಗೋಣ..ಪರಿಸರ ಸ್ನೇಹಿಗಳಾಗೋಣ.. ಪರಿಸರ ಎನ್ನುವ ಶಬ್ದಕ್ಕೆ ಅರ್ಥ ಸುತ್ತುಮುತ್ತಲು ಎನ್ನುವುದಿದೆ. ಮನೆಯಿಂದ ಹೊರಹೊರಟಾಗ ಪ್ರಕೃತಿಯ ಸೌಂದರ್ಯ ಸೆಳೆಯುತ್ತವೆ. ಹರಿಯುವ ನದಿಗಳು, ಗುಡ್ಡಕಾಡುಗಳು, ಹಾರಾಡುವ ಪಕ್ಷಿಗಳು, ಓಡಾಡುವ ಪ್ರಾಣಿಗಳು, ಸರೀಸೃಪಗಳು ಎಲ್ಲವೂ ಎದುರು ಕಾಣುತ್ತದೆ.  ಪರಿಸರಸ್ನೇಹಿ ಎನ್ನುವುದು ನಮ್ಮೆಲ್ಲರಿಗೂ ಅನ್ವಯಿಸುತ್ತದೆ. ಇಲ್ಲೊಂದು ಮುಖ್ಯವಾದ ವಿಚಾರವನ್ನು ಗಮನಿಸಬೇಕು. ಬೆಳೆದು ನಿಂತ ಮರಗಳು ನೆರಳನ್ನು, ಹಣ್ಣುಗಳನ್ನು ಕೊಟ್ಟು ಉಪಕೃತವಾಗುತ್ತವೆ.…

ಮನೆ-ಮನೆಗಳಲ್ಲಿ ತುಳು ಭಾಷೆ ಬೆಳೆಯಲಿ – 21ನೇ ತುಳು ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಒಡಿಯೂರು ಶ್ರೀ ಆಶೀರ್ವಚನ

“ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ರಾಜ್ಯ, ಕೇಂದ್ರ ಸರಕಾರಗಳಿಗೆ ಮನವಿ ಮಾಡಲಾಗಿದೆ. ತುಳುವರಲ್ಲಿ ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾಶಕ್ತಿಯ ಕೊರತೆಯಿದೆ. ಅದನ್ನು ನಿವಾರಿಸಿ ಸಮ್ಮಿಳಿತ ಪ್ರಯತ್ನವಾಗಬೇಕು. ಮನೆ-ಮನೆಗಳಲ್ಲಿ ತುಳು ಭಾಷೆಯಲ್ಲೇ ಮಾತುಕತೆಯಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಜರಗಿದ 21ನೇ ತುಳು ಸಾಹಿತ್ಯ…

21ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಒಡಿಯೂರು ಶ್ರೀ ಆಶೀರ್ವಚನ

ಫೆ.21: “ಸಾಹಿತ್ಯ ಶ್ರೇಷ್ಠವಾದುದು. ವೇದ, ಉಪನಿಷತ್ತು, ಪುರಾಣ, ಸಾಹಿತ್ಯ ಅಧ್ಯಯನದಿಂದ ಜ್ಞಾನವೃದ್ಧಿಯಾಗುತ್ತದೆ. ಹಲವು ಭಾಷೆಗಳ ಅಡಕತ್ತರಿಯಲ್ಲಿ ಸಿಲುಕಿದ್ದರಿಂದ ತುಳು ಭಾಷೆ ಕಡೆಗಣಿಸಲ್ಪಟ್ಟಿದೆ. ತುಳು ಭಾಷಿಗರು ಪರಿಶುದ್ಧವಾಗಿ ತುಳುವಲ್ಲಿ ಸಂವಹನ ಮಾಡಬೇಕು. ತುಳು ಭಾಷಾ ಪ್ರೇಮ ಆತ್ಮಜ್ಯೋತಿಯಾಗಿ ಅರಳಬೇಕು. ತುಳು ಭಾಷೆಯ ಏಳ್ಗೆಗಾಗಿ ಸಂಘಟಿತ ಪ್ರಯತ್ನವಾಗಬೇಕು. ತುಳುವರ ಸೇವಾ ಮನೋಭಾವ ಸಮಷ್ಠಿಯಲ್ಲಿ ಕಾಣಬೇಕು” ಎಂದು ಪರಮಪೂಜ್ಯ ಶ್ರೀ…

ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸುಳ್ಯ ಸಮಿತಿಯ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

ಸುಳ್ಯ, ಜ.26: “ನಮ್ಮ ಬದುಕಿಗೂ ಒಂದು ಸಂವಿಧಾನ ಬೇಕು. ಅದುವೇ ಧರ್ಮ. ಮಾನವೀಯತೆಯ ಬದುಕು ಅಗತ್ಯ. ಬದುಕೇ ಒಂದು ಸಂದೇಶವಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಷಷ್ಠ್ಯಬ್ದ ಆಚರಣೆಯಂಗವಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲ್ಲಿ ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸುಳ್ಯ ಸಮಿತಿಯ ಸರಣಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಆಶೀರ್ವಚನಗೈದರು. ಸಾಧ್ವಿ…

ಕೃಷಿ ಸಂಪತ್ತೇ ಭಾರತದ ಸಂಪತ್ತು

ರೈತರ ಶ್ರಮಕ್ಕೆ ಪ್ರತಿಫಲ ನಿಶ್ಚಿತ –ಒಡಿಯೂರು ಶ್ರೀ ಕನ್ಯಾನ, ಜ.11: “ಪ್ರಕೃತಿಯನ್ನು ಉಳಿಸುವ ಕಾರ್ಯ ಎಲ್ಲೆಡೆ ಆಗಬೇಕು. ಕೃಷಿ ಸಂಪತ್ತೇ ಭಾರತದ ಸಂಪತ್ತು. ಅದು ನಮ್ಮ ಸಂಸ್ಕøತಿಯೂ ಹೌದು. ಕೋವಿಡ್‍ನಿಂದಾಗಿ ಕೃಷಿ ಪ್ರಗತಿಯತ್ತ ಸಾಗಿದೆ. ಕೃಷಿಕರ ಬೆಳವಣಿಗೆಗೆ ಸಹಕರಿಸಬೇಕು. ಕೃಷಿಯ ಆಸಕ್ತಿಯಿಂದ ಭಾರತ ಉಳಿದಿದೆ. ಬಾಹ್ಯದಲ್ಲಿ ಆಹಾರದ ಕೃಷಿ ಮಾಡುವ ಜೊತೆಗೆ ಅಂತರಂಗದಲ್ಲಿ ಅಧ್ಯಾತ್ಮದ ಕೃಷಿಯನ್ನೂ…